5:05 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ನಂಜನಗೂಡು ತಾಲೂಕು ಗಾಣಿಗರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ

29/08/2024, 20:39

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಗಾಣಿಗರ ಸೌಹಾರ್ದ ಸಂಘದ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು.
ಪಟ್ಟಣದ ಶ್ರಾವಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಅಖಿಲ ಕರ್ನಾಟಕ ಗಾಣಿಗರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ್ ಗಾಣಿಗ ಸೇರಿದಂತೆ ಮತ್ತಿತರ ಗಣ್ಯರು ಸಂಘದ ನಾಮಫಲಕ ಹಾಗೂ ಶಿವಶರಣ ಗಾಣಿಗರ ಕಪ್ಪಣ್ಣ ಅವರ ಭಾವಚಿತ್ರವನ್ನು ಅನಾವರಣ ಮಾಡುವ ಮೂಲಕ ಚಾಲನೆ ನೀಡಿದರು.


ಕಾರ್ಯಕ್ರಮ ಉದ್ಘಾಟಿಸಿ ರಾಜಶೇಖರ್ ಗಾಣಿಗ ಮಾತನಾಡಿ, ಸಂಘಟನೆಯಲ್ಲಿ ಶಕ್ತಿ ಇದೆ ಎನ್ನುವುದಕ್ಕೆ ಈ ಸಹಕಾರಿ ಕ್ಷೇತ್ರವೇ ಸಾಕ್ಷಿ. ಹಿಂದುಳಿದ ನಮ್ಮ ಸಮಾಜದ ವತಿಯಿಂದ ವಿವಿಧಡೆ ಇಂತಹ ಸೌಹಾರ್ದ ಸಹಕಾರಿ ಸಂಘಗಳನ್ನು ನಡೆಸುವ ಮೂಲಕ ನೂರಾರು ಕೋಟಿ ರೂಪಾಯಿಗಳ ವಹಿವಾಟು ನಡೆಸುತ್ತಾ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ನಂಜುಂಡೇಶ್ವರನ ಸಮಿತಿಯಲ್ಲಿ ನಮ್ಮ ಸಮಾಜದ ವತಿಯಿಂದ ಸೌಹಾರ್ದ ಸಹಕಾರಿ ಬ್ಯಾಂಕನ್ನು ಸಂತೋಷದಿಂದ ಉದ್ಘಾಟನೆ ಮಾಡುತ್ತಿದ್ದೇನೆ. ಇದು ಅಭಿವೃದ್ಧಿ ಪತದತ್ತ ಸಾಗಲಿ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಸಂಘದ ಉಪಾಧ್ಯಕ್ಷ ಬಸವರಾಜು ಪ್ರಾಸ್ತಾವಿಕವಾಗಿ ಮಾತನಾಡಿ, ತಾಲೂಕಿನಲ್ಲಿ ಕೇವಲ ಹತ್ತು ಸಾವಿರ ಜನಸಂಖ್ಯೆ ಇರುವ ನಮ್ಮ ಸಮಾಜದ ವತಿಯಿಂದ 400 ಸದಸ್ಯರಿಂದ ಸುಮಾರು 7 ಲಕ್ಷ ಠೇವಣಿ ಸಂಗ್ರಹಿಸಿ ಸಂಘವನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರನ್ನು ಹಾಗೂ ಸಮಾಜದ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶಂಕರ್, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಪ್ರಾಂತೀಯ ಹಾಗೂ ಅಭಿವೃದ್ಧಿ ಅಧಿಕಾರಿಗಳಾದ ಗುರುಪ್ರಸಾದ್ ಬಂಗೇರ, ಸುರೇಶ್, ಲೆಕ್ಕ ಪರಿಶೋಧಕರಾದ ಸಂತೋಷ್, ನಿರ್ದೇಶಕರುಗಳಾದ ಮಾದ ಶೆಟ್ಟಿ, ಸ್ವಾಮಿ, ರಾಮಚಂದ್ರು, ಮಹೇಶ್ ಸೇರಿದಂತೆ ಎಲ್ಲಾ ನಿರ್ದೇಶಕರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು