11:37 PM Thursday7 - August 2025
ಬ್ರೇಕಿಂಗ್ ನ್ಯೂಸ್
ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ…

ಇತ್ತೀಚಿನ ಸುದ್ದಿ

ನಂಜನಗೂಡು: ಟಿವಿಎಸ್ ಕಂಪನಿ ವತಿಯಿಂದ ಸಾಂಪ್ರದಾಯಿಕ ಹಳ್ಳಿ ಹಬ್ಬ ಆಚರಣೆ

02/02/2025, 16:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಟಿವಿಎಸ್ ಕಂಪನಿಯ ಶ್ರೀನಿವಾಸನ್ ಸರ್ವಿಸಸ್ ಟ್ರಸ್ಟ್ ಮತ್ತು ಸುಂದರಂ ಕ್ಲೇಟಾನ್ ನ ಸಾಮಾಜಿಕ ಅಂಗ ಸಂಸ್ಥೆ ಹಾಗೂ ನಂಜನಗೂಡು ತಾಲೂಕು ಹೆಚ್ ಕೊಂಗಳ್ಳಿ ಗ್ರಾಮಸ್ಥರ ಸಹಯೋಗದೊಂದಿಗೆ ಹಳ್ಳಿ ಹಬ್ಬ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಕೊಂಗಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜ್ ಹಾಗೂ ಸಂಜೀವಿನಿ ಸಂಘದ ಮುಖ್ಯಸ್ಥರಾದ ಜಯಲಕ್ಷ್ಮಿ ಮಾತನಾಡಿ
ಹಿಂದಿನ ನಮ್ಮ ಪೂರ್ವಜರು ಆಚರಿಸಿಕೊಂಡು ಬರುತ್ತಿದ್ದ ಗ್ರಾಮೀಣ ಸೊಗಡಿನ ಹಲವಾರು ಸಾಂಸ್ಕೃತಿಕ ಕಲೆ, ಸಂಸ್ಕೃತಿ, ಉಡುಗೆ, ತೊಡುಗೆ, ಆಹಾರ ಸೇರಿದಂತೆ ಹಲವಾರು ಸಾಂಪ್ರದಾಯಿಕ ಹಬ್ಬಗಳು ನಶಿಸಿ ಹೋಗುತ್ತಿವೆ ಹಾಗಾಗಿ ಅದನ್ನು ಹಳ್ಳಿಗಳಲ್ಲಿ ಉಳಿಸಿ ಬೆಳೆಸಿ ಮತ್ತೆ ಮರುಕಳಿಸುವಂತೆ ಟಿವಿಎಸ್ ಕಂಪನಿಯವರು ಗ್ರಾಮಸ್ಥರ ಸಹಯೋಗದೊಂದಿಗೆ ಹಳ್ಳಿಗಳಲ್ಲಿ ಇಂತಹ ಆಚರಣೆ ಆಚರಿಸುತ್ತಿರುವುದು ತುಂಬಾ ಸಂತೋಷ ತಂದಿದೆ ಎಂದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಹಳ್ಳಿ ಸೊಗಡಿನ ಭತ್ತ, ರಾಗಿ, ಜೋಳ ಸೇರಿದಂತೆ ವಿವಿಧ ಧಾನ್ಯಗಳ ರಾಶಿ ಪೂಜೆ, ಗೋಪೂಜೆ, ಭತ್ತ ಕುಟ್ಟುವುದು, ರಾಗಿ ಬೀಸುವುದು, ಸೋಬಾನೆ ಪದ, ರಂಗೋಲಿ ಸ್ಪರ್ಧೆ ಸೇರಿದಂತೆ ಮಕ್ಕಳು ಹಾಗೂ ಮಹಿಳೆಯರಿಗೆ ಸಾಂಸ್ಕೃತಿಕ ಹಾಗು ಆಟೋಟ ಸ್ಪರ್ಧೆಗಳನ್ನು ನಡೆಸಿ ಹಳ್ಳಿ ಹಬ್ಬಗಳಿಗೆ ಮರುಜೀವ ನೀಡುವ ಕೆಲಸ ನಡೆಸಲಾಯಿತು.
ಕಾರ್ಯಕ್ರಮಕ್ಕೆ ಮುನ್ನ ಕಳಸ ಹೊತ್ತ ಹೆಣ್ಣು ಮಕ್ಕಳು ಹಾಗೂ ಮಹಿಳೆಯರು ಸೋಬಾನೆ ಪದ ಆಡುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಲಾಯಿತು.


ಒಟ್ಟಾರೆ ಈ ಕಾರ್ಯಕ್ರಮವು ಹಿಂದಿನ ಹಳ್ಳಿ ಸೊಗಡಿನ ಸಾಂಪ್ರದಾಯಿಕವನ್ನು ನೆನಪಿಸುವಂತಿತ್ತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಸವರಾಜು, ಮುಖಂಡರಾದ ಕೆಎಲ್ ಬಸವರಾಜು, ಕೆ ಸಿ ನಾಗಪ್ಪ, ಜಿಲ್ಲಾ ಸಂಯೋಜಕ ಚನ್ನಪ್ಪ ನಾಯಕ,ಶಿವಬಸಪ್ಪ, ದೇವಣ್ಣ, ರಾಜಶೇಖರ್, ಸವಿತಾ ಕುಮಾರಿ, ಮಹದೇವಮ್ಮ ಸೇರಿದಂತೆ ಗ್ರಾಮದ ಯಜಮಾನರುಗಳು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು