12:08 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಂಜನಗೂಡು: ವಾಲ್ಮೀಕಿ ಜಯಂತಿ ಆಚರಣೆ; ಕುದುರೆ ಸಾರೋಟು ಮಾದರಿಯ ವಾಹನದಲ್ಲಿ ಮಹರ್ಷಿ ಭಾವಚಿತ್ರವಿರಿಸಿ ಮೆರವಣಿಗೆ

26/11/2023, 13:58

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಾಲ್ಮೀಕಿ ನಾಯಕರ ಯುವಕರ ಸಂಘ ಹಾಗೂ ಚಿಕ್ಕರಂಗನಾಯಕ ಅಭಿಮಾನಿ ಬಳಗದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.


ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಮಾತನಾಡಿ
ಮಹರ್ಷಿ ವಾಲ್ಮೀಕಿ, ಕನಕದಾಸರು, ಬುದ್ಧ ಬಸವ ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತರಾದವರಲ್ಲ. ಅವರು ಎಲ್ಲ ಸಮಾಜಕ್ಕೂ ಎಲ್ಲ ವರ್ಗದವರಿಗೂ ಅನುಕೂಲವಾಗುವಂತಹ ಕಾರ್ಯಗಳನ್ನು ಮಾಡಿದ್ದಾರೆ. ಹಾಗಾಗಿ ಅವರನ್ನು ಇಂದಿನ ಪೀಳಿಗೆ ನೆನೆಯುತ್ತಾರೆ ಎಂದು ಮಹರ್ಷಿಗಳ ಬಗ್ಗೆ ಹಾಗೂ ಅವರು ಬರೆದ ರಾಮಾಯಣ ಕಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭ ಅದೇ ಗ್ರಾಮದ ಸಾಹಿತಿಗಳಿಬ್ಬರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಕಾರ್ಯಕ್ರಮಕ್ಕೆ ಬಂದ ಮಾಜಿ ಶಾಸಕರು ಹಾಗೂ ವೇದಿಕೆ ಮೇಲಿನ ಗಣ್ಯರನ್ನು ಸಹ ಸನ್ಮಾನಿಸಲಾಯಿತು. ನಂತರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕುದುರೆ ಸಾರೋಟಿನ ಮಾದರಿಯಲ್ಲಿರುವ ವಾಹನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನಿರಿಸಿ ಮೆರವಣಿಗೆ ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಮಹೇಶ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಹೆಮ್ಮೆರಗಾಲ ಸೋಮಣ್ಣ, ಮುಖಂಡರಾದ ಸಂತೋಷ್, ಮಸಗೆ ರಾಜು, ಗೋವಿಂದರಾಜ್, ಪರಶಿವಮೂರ್ತಿ ಶಿವಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು