3:00 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಂಜನಗೂಡು: ವಾಲ್ಮೀಕಿ ಜಯಂತಿ ಆಚರಣೆ; ಕುದುರೆ ಸಾರೋಟು ಮಾದರಿಯ ವಾಹನದಲ್ಲಿ ಮಹರ್ಷಿ ಭಾವಚಿತ್ರವಿರಿಸಿ ಮೆರವಣಿಗೆ

26/11/2023, 13:58

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಾಲ್ಮೀಕಿ ನಾಯಕರ ಯುವಕರ ಸಂಘ ಹಾಗೂ ಚಿಕ್ಕರಂಗನಾಯಕ ಅಭಿಮಾನಿ ಬಳಗದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.


ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಮಾತನಾಡಿ
ಮಹರ್ಷಿ ವಾಲ್ಮೀಕಿ, ಕನಕದಾಸರು, ಬುದ್ಧ ಬಸವ ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತರಾದವರಲ್ಲ. ಅವರು ಎಲ್ಲ ಸಮಾಜಕ್ಕೂ ಎಲ್ಲ ವರ್ಗದವರಿಗೂ ಅನುಕೂಲವಾಗುವಂತಹ ಕಾರ್ಯಗಳನ್ನು ಮಾಡಿದ್ದಾರೆ. ಹಾಗಾಗಿ ಅವರನ್ನು ಇಂದಿನ ಪೀಳಿಗೆ ನೆನೆಯುತ್ತಾರೆ ಎಂದು ಮಹರ್ಷಿಗಳ ಬಗ್ಗೆ ಹಾಗೂ ಅವರು ಬರೆದ ರಾಮಾಯಣ ಕಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭ ಅದೇ ಗ್ರಾಮದ ಸಾಹಿತಿಗಳಿಬ್ಬರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಕಾರ್ಯಕ್ರಮಕ್ಕೆ ಬಂದ ಮಾಜಿ ಶಾಸಕರು ಹಾಗೂ ವೇದಿಕೆ ಮೇಲಿನ ಗಣ್ಯರನ್ನು ಸಹ ಸನ್ಮಾನಿಸಲಾಯಿತು. ನಂತರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕುದುರೆ ಸಾರೋಟಿನ ಮಾದರಿಯಲ್ಲಿರುವ ವಾಹನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನಿರಿಸಿ ಮೆರವಣಿಗೆ ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಮಹೇಶ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಹೆಮ್ಮೆರಗಾಲ ಸೋಮಣ್ಣ, ಮುಖಂಡರಾದ ಸಂತೋಷ್, ಮಸಗೆ ರಾಜು, ಗೋವಿಂದರಾಜ್, ಪರಶಿವಮೂರ್ತಿ ಶಿವಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು