3:58 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು: ವಾಲ್ಮೀಕಿ ಜಯಂತಿ ಆಚರಣೆ; ಕುದುರೆ ಸಾರೋಟು ಮಾದರಿಯ ವಾಹನದಲ್ಲಿ ಮಹರ್ಷಿ ಭಾವಚಿತ್ರವಿರಿಸಿ ಮೆರವಣಿಗೆ

26/11/2023, 13:58

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಾಲ್ಮೀಕಿ ನಾಯಕರ ಯುವಕರ ಸಂಘ ಹಾಗೂ ಚಿಕ್ಕರಂಗನಾಯಕ ಅಭಿಮಾನಿ ಬಳಗದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.


ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಮಾತನಾಡಿ
ಮಹರ್ಷಿ ವಾಲ್ಮೀಕಿ, ಕನಕದಾಸರು, ಬುದ್ಧ ಬಸವ ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತರಾದವರಲ್ಲ. ಅವರು ಎಲ್ಲ ಸಮಾಜಕ್ಕೂ ಎಲ್ಲ ವರ್ಗದವರಿಗೂ ಅನುಕೂಲವಾಗುವಂತಹ ಕಾರ್ಯಗಳನ್ನು ಮಾಡಿದ್ದಾರೆ. ಹಾಗಾಗಿ ಅವರನ್ನು ಇಂದಿನ ಪೀಳಿಗೆ ನೆನೆಯುತ್ತಾರೆ ಎಂದು ಮಹರ್ಷಿಗಳ ಬಗ್ಗೆ ಹಾಗೂ ಅವರು ಬರೆದ ರಾಮಾಯಣ ಕಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭ ಅದೇ ಗ್ರಾಮದ ಸಾಹಿತಿಗಳಿಬ್ಬರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಕಾರ್ಯಕ್ರಮಕ್ಕೆ ಬಂದ ಮಾಜಿ ಶಾಸಕರು ಹಾಗೂ ವೇದಿಕೆ ಮೇಲಿನ ಗಣ್ಯರನ್ನು ಸಹ ಸನ್ಮಾನಿಸಲಾಯಿತು. ನಂತರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕುದುರೆ ಸಾರೋಟಿನ ಮಾದರಿಯಲ್ಲಿರುವ ವಾಹನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನಿರಿಸಿ ಮೆರವಣಿಗೆ ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಮಹೇಶ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಹೆಮ್ಮೆರಗಾಲ ಸೋಮಣ್ಣ, ಮುಖಂಡರಾದ ಸಂತೋಷ್, ಮಸಗೆ ರಾಜು, ಗೋವಿಂದರಾಜ್, ಪರಶಿವಮೂರ್ತಿ ಶಿವಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು