8:55 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ನಂಜನಗೂಡು: ಸಂಭ್ರಮದಿಂದ ಸಂಪನ್ನಗೊಂಡ ಶ್ರೀಕಾರ್ಯ ಸಿದ್ದೇಶ್ವರ ಸ್ವಾಮಿ ರಥೋತ್ಸವ

04/11/2024, 11:18

*ರಥೋತ್ಸವದ ಖುರ್ಜನ್ನು ಬೆಟ್ಟದ ಮೇಲಕ್ಕೆ ಹೆಗಲ ಮೇಲೆ ಹೊತ್ತ್ಯೋಯ್ದ ಭಕ್ತರು*
.
ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರ್ಯ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿ ವ್ಯಾಪ್ತಿಯ ಕಾರ್ಯ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಸುಮಾರು ಮೂರು ದಿನಗಳ ಕಾಲ ನಡೆಸಲಾಗುತ್ತದೆ. ಮುಂಜಾನೆ ಅರ್ಚಕರು ಕಾಲ್ನಡಿಗೆಯಲ್ಲಿ ನಡೆದುಕೊಂಡು ಹೋಗಿ ಸುತ್ತೂರಿನ ಕಪಿಲಾ ನದಿಯಲ್ಲಿ ನೀರನ್ನು ತಂದು ಶ್ರೀ ಸಿದ್ದೇಶ್ವರ ಸ್ವಾಮಿಯ ವಿಗ್ರಹಕ್ಕೆ ಅಭಿಷೇಕ ಮಾಡಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ. ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವಕ್ಕೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ವಾಟಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ವಿದ್ಯುಕ್ತವಾಗಿ ಚಾಲನೆ ನೀಡಿದರು.


ನಂತರ ಬಣ್ಣ,ಬಣ್ಣದ ಬಾವುಟ ಹಾಗೂ ಹೂವುಗಳಿಂದ ಶೃಂಗರಿಸಲಾಗಿದ್ದ ಐತಿಹಾಸಿಕ ಖುರ್ಜು ರಥವನ್ನು ಗ್ರಾಮಸ್ಥರು ಊರಿನ ಹೊರವಲಯದ ತನಕ ಎಳೆದರು. ನಂತರ ಗ್ರಾಮಸ್ಥರು ಮತ್ತು ಭಕ್ತರು ತಮ್ಮ ಹೆಗಲ ಮೇಲೆ ಖುರ್ಜು ರಥವನ್ನು ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟಕ್ಕೆ ಹೊತ್ತುಕೊಂಡು ತೆರಳಿದರು ರಥೋತ್ಸವಕ್ಕೆ ಭಕ್ತರು ಹಣ್ಣು ಜವನ ಎಸೆದು ಪುನೀತರಾದರು. ಬೆಟ್ಟದ ಮೇಲಕ್ಕೆ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿದ್ದ ದೃಶ್ಯ ಕಂಡು ಮೈ ರೋಮಾಂಚನಗೊಂಡಿತು. ಉಘೇ ಉಘೇ ಸಿದ್ದೇಶ್ವರ ಎಂದು ಭಕ್ತರು ಘೋಷಣೆ ಕೂಗುತ್ತ ಸಾಗಿದರು. ಲಕ್ಷಾಂತರ ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಂಡರು. ಹರಕೆ ಹೊತ್ತ ಭಕ್ತರು ಮಜ್ಜಿಗೆ ಪಾನಕ ಸೇರಿದಂತೆ ತಂಪು ಪಾನೀಯವನ್ನು ವಿತರಿಸಿದರು. ವಿವಿದೆಡೆಯಿಂದ ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು ‌.

ಇತ್ತೀಚಿನ ಸುದ್ದಿ

ಜಾಹೀರಾತು