6:27 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರದ್ಧಾಭಕ್ತಿಯಿಂದ ನಡೆದ ಸುತ್ತೂರು ಜಾತ್ರಾ ರಥೋತ್ಸವ; 40 ಜಾನಪದ ತಂಡಗಳ ಮೆರುಗು

28/01/2025, 21:58

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ 6 ದಿನಗಳ ಕಾಲ ನಡೆಯುತ್ತಿರುವ ಅದ್ದೂರಿ ಜಾತ್ರಾ ಮಹೋತ್ಸವದ 3ನೇ ದಿನವಾದ ಇಂದು ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ರಥೋತ್ಸವ ಸಡಗರ- ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹಾಗೂ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಗದ್ದುಗೆಯಿಂದ ತಂದ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಅಲಂಕೃತ ಉತ್ಸವ ಮೂರ್ತಿಯನ್ನು ಬಣ್ಣ ಬಣ್ಣದ ಬಾವುಟ, ಬಂಟಿಂಗ್ಸ್, ಹೂ ಗಳಿಂದ ಅಲಂಕರಿಸಲಾದ ಬೃಹತ್ ರಥದಲ್ಲಿ ಕೂರಿಸಲಾಯಿತು.
ನಂತರ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ವಿವಿಧ ಮಠಾಧೀಶರು ಹಾಗೂ ಗಣ್ಯರು ರಥಕ್ಕೆ ಪೂಜೆ ಸಲ್ಲಿಸಿ ಹಣ್ಣು ಜವನ ಎಸೆದು ಪುಷ್ಪಾರ್ಚನೆ ಮಾಡುವ ಮೂಲಕ ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.


ನಂದಿಧ್ವಜ, ವೀರಗಾಸೆ, ಮಂಗಳವಾದ್ಯ, ಮಹಿಳೆಯರ ಚಂಡೆ ವಾದ್ಯ, ಪೂಜಾ ಕುಣಿತ, ಡೊಳ್ಳು ಕುಣಿತ, ತಮಟೆ ವಾದ್ಯ, ಗಾರುಡಿ ಗೊಂಬೆ, ಹುಲಿ ವೇಷ ಗೊರವರ ಕುಣಿತ ಸೇರಿದಂತೆ 40ಕ್ಕೂ ಹೆಚ್ಚು ವಿವಿಧ ಜಾನಪದ ಕಲಾತಂಡಗಳು ರಥೋತ್ಸವದಲ್ಲಿ ಪಾಲ್ಗೊಂಡು ಜಾತ್ರೆಗೆ ಮೆರುಗು ತಂದವು.
ರಾಜ್ಯದ ನಾನಾ ಮೂಲೆಗಳಿಂದ ಲಕ್ಷಾಂತರ ಭಕ್ತರು ಜಾತ್ರೆ ಹಾಗೂ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀ ಅವರ ರಥಕ್ಕೆ ಹಣ್ಣು ಜವನ ಎಸೆಯುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಜಾತ್ರೆಗೆ ಬಂದ ಲಕ್ಷಾಂತರ ಭಕ್ತರಿಗೆ ಮಹಾದಾಸೋಹದ ವ್ಯವಸ್ಥೆ ಕಲ್ಪಿಸಿ ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಕೌಂಟರ್ ಗಳನ್ನು ನಿರ್ಮಿಸಿ ಭರ್ಜರಿ ಸಿಹಿ ಊಟ ನೀಡಲಾಯಿತು.
ಹತ್ತೂರ ಜಾತ್ರೆಗೆ ಸುತ್ತೂರು ಜಾತ್ರೆ ಸಮ ಎಂಬ ನಾಣ್ಣುಡಿಯಂತೆ ಸುತ್ತೂರು ಜಾತ್ರೆಗೆ ಭಕ್ತರ ಮಹಾಪೂರವೇ ಹರಿದು ಬಂದು ಎಲ್ಲಿ ನೋಡಿದರಲ್ಲಿ ಜನಸಾಗರವೇ ಎದ್ದು ಕಾಣುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು