3:43 AM Wednesday18 - June 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ

ಇತ್ತೀಚಿನ ಸುದ್ದಿ

ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಕುರಿತು ಪರಿಶೀಲನೆ

20/02/2025, 16:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಪೇಪರ್ ಬಳಸುತ್ತಿರುವ ಕುರಿತು ಹೆಚ್.ಡಿ.ಕೋಟೆ ಪಟ್ಟಣದ ಹೋಟೆಲ್ ಗಳಿಗೆ ಮತ್ತು ಬೀದಿ ಬದಿ ವ್ಯಾಪಾರಿ ಗಳ ಮಳಿಗೆ ಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಗಳಾದ ಡಾ.ರವಿಕುಮಾರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳು ಮಾತನಾಡಿ
ರಾಜ್ಯಾದ್ಯಂತ‌ ಪ್ಲಾಸ್ಟಿಕ್ ಗಳನ್ನು ನಿಷೇಧ ಮಾಡಲಾಗಿದೆ. ಯಾವುದೇ ಆಹಾರ ಪದಾರ್ಥಗಳಿಗೆ ಆಹಾರ ತಯಾರಿಸಲು ಹಾಗೂ ಆಹಾರವನ್ನು, ಪಾರ್ಸೆಲ್ ಕಟ್ಟಿಕೊಡಲು ಪ್ಲಾಸ್ಟಿಕ್ ಗಳನ್ನು ಬಳಸುವಂತಿಲ್ಲ,ಎಲ್ಲ ಹೋಟೆಲ್, ಕ್ಯಾಂಟೀನ್ ಮತ್ತು ಬೀದಿಬದಿ ವ್ಯಾಪಾರಿಗಳು,ಸಾರ್ವಜನಿಕರಿಗೆ ಶುದ್ಧವಾದ ಆಹಾರವನ್ನು ನೀಡಬೇಕು,ಆಹಾರವನ್ನು ತಯಾರಿಸಿದ ನಂತರ ಮುಚ್ಚಿಡಬೇಕು ಹಾಗೂ ಅಡುಗೆ ಮನೆಯನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳಬೇಕು, ಬೇಸಿಗೆ ಕಾಲ ವಾದರಿಂದ ಜನರಿಗೆ ಕುಡಿಯಲು ಕಡ್ಡಾಯವಾಗಿ ಬಿಸಿ. ನೀರನ್ನು ನೀಡಬೇಕು, ಎಂದು ತಿಳಿಸಿದರು.


ನಂತರ ಹೋಟೆಲ್ ಗಳಿಂದ ಆಹಾರ ಪದಾರ್ಥಗಳನ್ನು (ಇಡ್ಲಿ ,ಚಟ್ನಿ, ಸಾಂಬಾರ್) ತೆಗೆದುಕೊಂಡು ಜಿಲ್ಲಾ ಮಟ್ಟದ ಪ್ರಯೋಗಾಲಯಕ್ಕೆ ಪರೀಕ್ಷೆ ಗೆ ಒಳಪಡಿಸಲಾಯಿತು.ಇದೇ ಸಂದರ್ಭದಲ್ಲಿ ಹೋಟೆಲ್ ಮತ್ತು ಕ್ಯಾಂಟೀನ್ ,ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿ ದಂಡ ಸಹ ವಿಧಿಸಲಾಯಿತು.
ಆರೋಗ್ಯ ಇಲಾಖೆ ಹಾಗೂ ಪುರಸಭೆ, ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು