5:18 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಕುರಿತು ಪರಿಶೀಲನೆ

20/02/2025, 16:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಪೇಪರ್ ಬಳಸುತ್ತಿರುವ ಕುರಿತು ಹೆಚ್.ಡಿ.ಕೋಟೆ ಪಟ್ಟಣದ ಹೋಟೆಲ್ ಗಳಿಗೆ ಮತ್ತು ಬೀದಿ ಬದಿ ವ್ಯಾಪಾರಿ ಗಳ ಮಳಿಗೆ ಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಗಳಾದ ಡಾ.ರವಿಕುಮಾರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳು ಮಾತನಾಡಿ
ರಾಜ್ಯಾದ್ಯಂತ‌ ಪ್ಲಾಸ್ಟಿಕ್ ಗಳನ್ನು ನಿಷೇಧ ಮಾಡಲಾಗಿದೆ. ಯಾವುದೇ ಆಹಾರ ಪದಾರ್ಥಗಳಿಗೆ ಆಹಾರ ತಯಾರಿಸಲು ಹಾಗೂ ಆಹಾರವನ್ನು, ಪಾರ್ಸೆಲ್ ಕಟ್ಟಿಕೊಡಲು ಪ್ಲಾಸ್ಟಿಕ್ ಗಳನ್ನು ಬಳಸುವಂತಿಲ್ಲ,ಎಲ್ಲ ಹೋಟೆಲ್, ಕ್ಯಾಂಟೀನ್ ಮತ್ತು ಬೀದಿಬದಿ ವ್ಯಾಪಾರಿಗಳು,ಸಾರ್ವಜನಿಕರಿಗೆ ಶುದ್ಧವಾದ ಆಹಾರವನ್ನು ನೀಡಬೇಕು,ಆಹಾರವನ್ನು ತಯಾರಿಸಿದ ನಂತರ ಮುಚ್ಚಿಡಬೇಕು ಹಾಗೂ ಅಡುಗೆ ಮನೆಯನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳಬೇಕು, ಬೇಸಿಗೆ ಕಾಲ ವಾದರಿಂದ ಜನರಿಗೆ ಕುಡಿಯಲು ಕಡ್ಡಾಯವಾಗಿ ಬಿಸಿ. ನೀರನ್ನು ನೀಡಬೇಕು, ಎಂದು ತಿಳಿಸಿದರು.


ನಂತರ ಹೋಟೆಲ್ ಗಳಿಂದ ಆಹಾರ ಪದಾರ್ಥಗಳನ್ನು (ಇಡ್ಲಿ ,ಚಟ್ನಿ, ಸಾಂಬಾರ್) ತೆಗೆದುಕೊಂಡು ಜಿಲ್ಲಾ ಮಟ್ಟದ ಪ್ರಯೋಗಾಲಯಕ್ಕೆ ಪರೀಕ್ಷೆ ಗೆ ಒಳಪಡಿಸಲಾಯಿತು.ಇದೇ ಸಂದರ್ಭದಲ್ಲಿ ಹೋಟೆಲ್ ಮತ್ತು ಕ್ಯಾಂಟೀನ್ ,ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿ ದಂಡ ಸಹ ವಿಧಿಸಲಾಯಿತು.
ಆರೋಗ್ಯ ಇಲಾಖೆ ಹಾಗೂ ಪುರಸಭೆ, ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು