3:54 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಕುರಿತು ಪರಿಶೀಲನೆ

20/02/2025, 16:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಪೇಪರ್ ಬಳಸುತ್ತಿರುವ ಕುರಿತು ಹೆಚ್.ಡಿ.ಕೋಟೆ ಪಟ್ಟಣದ ಹೋಟೆಲ್ ಗಳಿಗೆ ಮತ್ತು ಬೀದಿ ಬದಿ ವ್ಯಾಪಾರಿ ಗಳ ಮಳಿಗೆ ಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಗಳಾದ ಡಾ.ರವಿಕುಮಾರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳು ಮಾತನಾಡಿ
ರಾಜ್ಯಾದ್ಯಂತ‌ ಪ್ಲಾಸ್ಟಿಕ್ ಗಳನ್ನು ನಿಷೇಧ ಮಾಡಲಾಗಿದೆ. ಯಾವುದೇ ಆಹಾರ ಪದಾರ್ಥಗಳಿಗೆ ಆಹಾರ ತಯಾರಿಸಲು ಹಾಗೂ ಆಹಾರವನ್ನು, ಪಾರ್ಸೆಲ್ ಕಟ್ಟಿಕೊಡಲು ಪ್ಲಾಸ್ಟಿಕ್ ಗಳನ್ನು ಬಳಸುವಂತಿಲ್ಲ,ಎಲ್ಲ ಹೋಟೆಲ್, ಕ್ಯಾಂಟೀನ್ ಮತ್ತು ಬೀದಿಬದಿ ವ್ಯಾಪಾರಿಗಳು,ಸಾರ್ವಜನಿಕರಿಗೆ ಶುದ್ಧವಾದ ಆಹಾರವನ್ನು ನೀಡಬೇಕು,ಆಹಾರವನ್ನು ತಯಾರಿಸಿದ ನಂತರ ಮುಚ್ಚಿಡಬೇಕು ಹಾಗೂ ಅಡುಗೆ ಮನೆಯನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳಬೇಕು, ಬೇಸಿಗೆ ಕಾಲ ವಾದರಿಂದ ಜನರಿಗೆ ಕುಡಿಯಲು ಕಡ್ಡಾಯವಾಗಿ ಬಿಸಿ. ನೀರನ್ನು ನೀಡಬೇಕು, ಎಂದು ತಿಳಿಸಿದರು.


ನಂತರ ಹೋಟೆಲ್ ಗಳಿಂದ ಆಹಾರ ಪದಾರ್ಥಗಳನ್ನು (ಇಡ್ಲಿ ,ಚಟ್ನಿ, ಸಾಂಬಾರ್) ತೆಗೆದುಕೊಂಡು ಜಿಲ್ಲಾ ಮಟ್ಟದ ಪ್ರಯೋಗಾಲಯಕ್ಕೆ ಪರೀಕ್ಷೆ ಗೆ ಒಳಪಡಿಸಲಾಯಿತು.ಇದೇ ಸಂದರ್ಭದಲ್ಲಿ ಹೋಟೆಲ್ ಮತ್ತು ಕ್ಯಾಂಟೀನ್ ,ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿ ದಂಡ ಸಹ ವಿಧಿಸಲಾಯಿತು.
ಆರೋಗ್ಯ ಇಲಾಖೆ ಹಾಗೂ ಪುರಸಭೆ, ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು