3:04 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ನಂಜನಗೂಡು: ಅಪ್ಪನ ಅವಧಿಯ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿದ ಪುತ್ರ; ಕೊನೆಗೂ ಬಸ್ ನಿಲ್ದಾಣ ಉದ್ಘಾಟನೆ

16/02/2025, 22:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತಂದೆ ಧ್ರುವನಾರಾಯಣ್ ಅವರು ಅನುದಾನ ನೀಡಿ ಅರ್ಧಂಬರ್ಧಗೊಂಡಿದ್ದ ಕಾಮಗಾರಿಗೆ ಮಗ ದರ್ಶನ್ ಧ್ರುವನಾರಾಯಣ್ ಮತ್ತಷ್ಟು ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ ದಿವಂಗತ ಆರ್. ಧ್ರುವನಾರಾಯಣ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದ ಬಸ್ ನಿಲ್ದಾಣಕ್ಕೆ 2017ರ ತಮ್ಮ ಅವಧಿಯಲ್ಲಿ 5 ಲಕ್ಷ ಅನುದಾನ ನೀಡಿ ಅದರಲ್ಲಿ 3 ಲಕ್ಷ ಹಣವನ್ನು ಮಂಜೂರು ಸಹ ಮಾಡಿಸಿದ್ದರು.
3 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಗೊಂಡು ಬಸ್ ನಿಲ್ದಾಣದ ಕಾಮಗಾರಿ ಸುಮಾರು ಏಳು ವರ್ಷದಿಂದ ಅರ್ಧಕ್ಕೆ ನಿಂತು ಹೋಗಿತ್ತು.


ಅವರ ನಂತರ ಬಂದ ಬಿಜೆಪಿಯ ಸಂಸದರಾಗಲಿ, ಶಾಸಕರಾಗಲಿ ಇದಕ್ಕೆ ಯಾವುದೇ ಹಣ ಬಿಡುಗಡೆ ಮಾಡದೆ ಇದ್ದ ಕಾರಣ ಕಾಮಗಾರಿಯು ಅರ್ಧಕ್ಕೆ ನಿಂತುಹೋಗಿತ್ತು. ಅವರ ನಿಧನದ ನಂತರ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರೇ ಶಾಸಕರಾಗಿ ಆಯ್ಕೆಯಾದರು.
ತಂದೆ ಧ್ರುವನಾರಾಯಣ್ ಅವರ ಅನುದಾನದಲ್ಲಿ ಅರ್ಧಕ್ಕೆ ನಿಂತಿದ ಬಸ್ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಮಗ ಶಾಸಕ ದರ್ಶನ್ ಧ್ರುವನಾರಾಯಣ್ ಅವರು 5 ಲಕ್ಷ ರೂಪಾಯಿ ಮಂಜೂರು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಕ್ಕೆ ಸುಸಜ್ಜಿತ ಬಸ್ ನಿಲ್ದಾಣ ಮಾಡಿಸಿಕೊಡುವ ಮೂಲಕ ಗ್ರಾಮಸ್ಥರ ಪ್ರಸಂಸೆ
ಗೆ ಪಾತ್ರರಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು