1:19 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ನಂಜನಗೂಡು: ಅಪ್ಪನ ಅವಧಿಯ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿದ ಪುತ್ರ; ಕೊನೆಗೂ ಬಸ್ ನಿಲ್ದಾಣ ಉದ್ಘಾಟನೆ

16/02/2025, 22:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತಂದೆ ಧ್ರುವನಾರಾಯಣ್ ಅವರು ಅನುದಾನ ನೀಡಿ ಅರ್ಧಂಬರ್ಧಗೊಂಡಿದ್ದ ಕಾಮಗಾರಿಗೆ ಮಗ ದರ್ಶನ್ ಧ್ರುವನಾರಾಯಣ್ ಮತ್ತಷ್ಟು ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ ದಿವಂಗತ ಆರ್. ಧ್ರುವನಾರಾಯಣ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದ ಬಸ್ ನಿಲ್ದಾಣಕ್ಕೆ 2017ರ ತಮ್ಮ ಅವಧಿಯಲ್ಲಿ 5 ಲಕ್ಷ ಅನುದಾನ ನೀಡಿ ಅದರಲ್ಲಿ 3 ಲಕ್ಷ ಹಣವನ್ನು ಮಂಜೂರು ಸಹ ಮಾಡಿಸಿದ್ದರು.
3 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಗೊಂಡು ಬಸ್ ನಿಲ್ದಾಣದ ಕಾಮಗಾರಿ ಸುಮಾರು ಏಳು ವರ್ಷದಿಂದ ಅರ್ಧಕ್ಕೆ ನಿಂತು ಹೋಗಿತ್ತು.


ಅವರ ನಂತರ ಬಂದ ಬಿಜೆಪಿಯ ಸಂಸದರಾಗಲಿ, ಶಾಸಕರಾಗಲಿ ಇದಕ್ಕೆ ಯಾವುದೇ ಹಣ ಬಿಡುಗಡೆ ಮಾಡದೆ ಇದ್ದ ಕಾರಣ ಕಾಮಗಾರಿಯು ಅರ್ಧಕ್ಕೆ ನಿಂತುಹೋಗಿತ್ತು. ಅವರ ನಿಧನದ ನಂತರ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರೇ ಶಾಸಕರಾಗಿ ಆಯ್ಕೆಯಾದರು.
ತಂದೆ ಧ್ರುವನಾರಾಯಣ್ ಅವರ ಅನುದಾನದಲ್ಲಿ ಅರ್ಧಕ್ಕೆ ನಿಂತಿದ ಬಸ್ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಮಗ ಶಾಸಕ ದರ್ಶನ್ ಧ್ರುವನಾರಾಯಣ್ ಅವರು 5 ಲಕ್ಷ ರೂಪಾಯಿ ಮಂಜೂರು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಕ್ಕೆ ಸುಸಜ್ಜಿತ ಬಸ್ ನಿಲ್ದಾಣ ಮಾಡಿಸಿಕೊಡುವ ಮೂಲಕ ಗ್ರಾಮಸ್ಥರ ಪ್ರಸಂಸೆ
ಗೆ ಪಾತ್ರರಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು