3:20 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ನಂಜನಗೂಡು: ಅಪ್ಪನ ಅವಧಿಯ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿದ ಪುತ್ರ; ಕೊನೆಗೂ ಬಸ್ ನಿಲ್ದಾಣ ಉದ್ಘಾಟನೆ

16/02/2025, 22:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತಂದೆ ಧ್ರುವನಾರಾಯಣ್ ಅವರು ಅನುದಾನ ನೀಡಿ ಅರ್ಧಂಬರ್ಧಗೊಂಡಿದ್ದ ಕಾಮಗಾರಿಗೆ ಮಗ ದರ್ಶನ್ ಧ್ರುವನಾರಾಯಣ್ ಮತ್ತಷ್ಟು ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ ದಿವಂಗತ ಆರ್. ಧ್ರುವನಾರಾಯಣ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದ ಬಸ್ ನಿಲ್ದಾಣಕ್ಕೆ 2017ರ ತಮ್ಮ ಅವಧಿಯಲ್ಲಿ 5 ಲಕ್ಷ ಅನುದಾನ ನೀಡಿ ಅದರಲ್ಲಿ 3 ಲಕ್ಷ ಹಣವನ್ನು ಮಂಜೂರು ಸಹ ಮಾಡಿಸಿದ್ದರು.
3 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಗೊಂಡು ಬಸ್ ನಿಲ್ದಾಣದ ಕಾಮಗಾರಿ ಸುಮಾರು ಏಳು ವರ್ಷದಿಂದ ಅರ್ಧಕ್ಕೆ ನಿಂತು ಹೋಗಿತ್ತು.


ಅವರ ನಂತರ ಬಂದ ಬಿಜೆಪಿಯ ಸಂಸದರಾಗಲಿ, ಶಾಸಕರಾಗಲಿ ಇದಕ್ಕೆ ಯಾವುದೇ ಹಣ ಬಿಡುಗಡೆ ಮಾಡದೆ ಇದ್ದ ಕಾರಣ ಕಾಮಗಾರಿಯು ಅರ್ಧಕ್ಕೆ ನಿಂತುಹೋಗಿತ್ತು. ಅವರ ನಿಧನದ ನಂತರ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರೇ ಶಾಸಕರಾಗಿ ಆಯ್ಕೆಯಾದರು.
ತಂದೆ ಧ್ರುವನಾರಾಯಣ್ ಅವರ ಅನುದಾನದಲ್ಲಿ ಅರ್ಧಕ್ಕೆ ನಿಂತಿದ ಬಸ್ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಮಗ ಶಾಸಕ ದರ್ಶನ್ ಧ್ರುವನಾರಾಯಣ್ ಅವರು 5 ಲಕ್ಷ ರೂಪಾಯಿ ಮಂಜೂರು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಕ್ಕೆ ಸುಸಜ್ಜಿತ ಬಸ್ ನಿಲ್ದಾಣ ಮಾಡಿಸಿಕೊಡುವ ಮೂಲಕ ಗ್ರಾಮಸ್ಥರ ಪ್ರಸಂಸೆ
ಗೆ ಪಾತ್ರರಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು