4:19 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ ಹಕ್ಕುಪತ್ರ ನೀಡಿದ್ದೆ: ಮಾಜಿ ಶಾಸಕ ಜೆ. ಆರ್. ಲೋಬೊ

11/02/2023, 19:37

ಮಂಗಳೂರು(reporterkarnataka.com): ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ, ಕಂದಾಯ ಸರ್ವೆ ನಂಬರ್ ಕೊಡಿಸಿದೆ. ಆ ಬಳಿಕ 2400 ಮಂದಿಯಲ್ಲಿ 1500 ಮಂದಿಗೆ ಹಕ್ಕುಪತ್ರ ನೀಡಲಾಗಿತ್ತು. ಈ ಜಾಗಗಳಿಗೆ ಮನಪಾದಿಂದ ಖಾತೆಯನ್ನು ಮಾಡಿಸಲಾಗಿದ್ದು, ಈ ದಾಖಲೆಗಳ ಮೂಲಕ ಸರಕಾರದ ಸೌಲಭ್ಯ, ಮನೆಗಳಿಗೆ ಬ್ಯಾಂಕ್ ಸಾಲವನ್ನು ಕೂಡ ಪಡೆದಿದ್ದಾರೆ. ಇದೀಗ ಶಾಸಕರು ಹಳೆಯ ಹಕ್ಕುಪತ್ರಕ್ಕೆ ಸರ್ವೆ ನಂಬ್ರ ಜೋಡಿಸಿ ನೀಡುತ್ತಿದ್ದಾರೆ ಅಷ್ಟೇ. ಆದರೆ 20 ಮಂದಿಗೆ ಹಕ್ಕು ಪತ್ರ ವಿತರಣೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಶಾಸಕ ಜೆ. ಆರ್. ಲೋಬೊ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಚುನಾವಣೆ ಸಮೀಪಿಸುತ್ತಿದ್ದಾಗ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬೆಂಗ್ರೆ ವ್ಯಾಪ್ತಿಯಲ್ಲಿ ಹಳೇ ಹಕ್ಕುಪತ್ರಕ್ಕೆ ಸರ್ವೆ ನಂಬರ್ ಸೇರಿಸಿ ನೀಡುತ್ತಿದ್ದು, ದೊಡ್ಡ ಸಾಧನೆ ಎಂಬ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದು ಮಾಜಿ ಶಾಸಕರು ಟೀಕಿಸಿದರು.

ಮೀನುಗಾರರು ಮತ್ತು ಬಂದರು ಅಭಿವೃದ್ಧಿಗೋಸ್ಕರ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 2500 ಕೋಟಿ ರೂ. ಅನುದಾನ ತಂದಿದ್ದು, ಅದರಲ್ಲಿ ಮೀನುಗಾರರ ಅಭಿವೃದ್ಧಿಗೆ ಅನುದಾನವನ್ನೇ ಮೀಸಲಿಟ್ಟಿಲ್ಲ. ಮೀನುಗಾರಿಕಾ ಬಂದರು ಅಭಿವೃದ್ಧಿಯಾಗಿಲ್ಲ, 3ನೇ ಹಂತದ ಬಂದರು ಅಭಿವೃದ್ಧಿ ಕೆಲಸ ಸ್ಥಗಿತಗೊಂಡಿದೆ. ಮೀನುಗಾರರ ಬಗ್ಗೆ ಕಾಳಜಿಯಿದ್ದರೆ ಸ್ಮಾರ್ಟ್ ಸಿಟಿಯಲ್ಲಿ ಅನುದಾನ ಮಿಸಲಿಡಬೇಕಿತ್ತು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆ. ಸಲೀಂ, ಶೇಖರ್ ಸುವರ್ಣ, ಚೇತನ್ ಬೆಂಗ್ರೆ, ನವೀನ್ ಕರ್ಕೇರ, ಸತೀಶ್ ಕೋಟ್ಯಾನ್, ಕವಿತಾ ವಾಸು, ಅಬ್ದುಲ್, ಶರೀಫ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು