11:44 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ ಹಕ್ಕುಪತ್ರ ನೀಡಿದ್ದೆ: ಮಾಜಿ ಶಾಸಕ ಜೆ. ಆರ್. ಲೋಬೊ

11/02/2023, 19:37

ಮಂಗಳೂರು(reporterkarnataka.com): ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ, ಕಂದಾಯ ಸರ್ವೆ ನಂಬರ್ ಕೊಡಿಸಿದೆ. ಆ ಬಳಿಕ 2400 ಮಂದಿಯಲ್ಲಿ 1500 ಮಂದಿಗೆ ಹಕ್ಕುಪತ್ರ ನೀಡಲಾಗಿತ್ತು. ಈ ಜಾಗಗಳಿಗೆ ಮನಪಾದಿಂದ ಖಾತೆಯನ್ನು ಮಾಡಿಸಲಾಗಿದ್ದು, ಈ ದಾಖಲೆಗಳ ಮೂಲಕ ಸರಕಾರದ ಸೌಲಭ್ಯ, ಮನೆಗಳಿಗೆ ಬ್ಯಾಂಕ್ ಸಾಲವನ್ನು ಕೂಡ ಪಡೆದಿದ್ದಾರೆ. ಇದೀಗ ಶಾಸಕರು ಹಳೆಯ ಹಕ್ಕುಪತ್ರಕ್ಕೆ ಸರ್ವೆ ನಂಬ್ರ ಜೋಡಿಸಿ ನೀಡುತ್ತಿದ್ದಾರೆ ಅಷ್ಟೇ. ಆದರೆ 20 ಮಂದಿಗೆ ಹಕ್ಕು ಪತ್ರ ವಿತರಣೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಶಾಸಕ ಜೆ. ಆರ್. ಲೋಬೊ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಚುನಾವಣೆ ಸಮೀಪಿಸುತ್ತಿದ್ದಾಗ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬೆಂಗ್ರೆ ವ್ಯಾಪ್ತಿಯಲ್ಲಿ ಹಳೇ ಹಕ್ಕುಪತ್ರಕ್ಕೆ ಸರ್ವೆ ನಂಬರ್ ಸೇರಿಸಿ ನೀಡುತ್ತಿದ್ದು, ದೊಡ್ಡ ಸಾಧನೆ ಎಂಬ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದು ಮಾಜಿ ಶಾಸಕರು ಟೀಕಿಸಿದರು.

ಮೀನುಗಾರರು ಮತ್ತು ಬಂದರು ಅಭಿವೃದ್ಧಿಗೋಸ್ಕರ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 2500 ಕೋಟಿ ರೂ. ಅನುದಾನ ತಂದಿದ್ದು, ಅದರಲ್ಲಿ ಮೀನುಗಾರರ ಅಭಿವೃದ್ಧಿಗೆ ಅನುದಾನವನ್ನೇ ಮೀಸಲಿಟ್ಟಿಲ್ಲ. ಮೀನುಗಾರಿಕಾ ಬಂದರು ಅಭಿವೃದ್ಧಿಯಾಗಿಲ್ಲ, 3ನೇ ಹಂತದ ಬಂದರು ಅಭಿವೃದ್ಧಿ ಕೆಲಸ ಸ್ಥಗಿತಗೊಂಡಿದೆ. ಮೀನುಗಾರರ ಬಗ್ಗೆ ಕಾಳಜಿಯಿದ್ದರೆ ಸ್ಮಾರ್ಟ್ ಸಿಟಿಯಲ್ಲಿ ಅನುದಾನ ಮಿಸಲಿಡಬೇಕಿತ್ತು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆ. ಸಲೀಂ, ಶೇಖರ್ ಸುವರ್ಣ, ಚೇತನ್ ಬೆಂಗ್ರೆ, ನವೀನ್ ಕರ್ಕೇರ, ಸತೀಶ್ ಕೋಟ್ಯಾನ್, ಕವಿತಾ ವಾಸು, ಅಬ್ದುಲ್, ಶರೀಫ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು