12:53 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಾನೊಬ್ಬ ಹಿಂದೂ ಎನ್ನಲು ಹೆಮ್ಮೆ ಇದೆ, ನಾನು ಕಲಿತ ಹಿಂದುತ್ವ ಇನ್ನೊಂದು ಜಾತಿ- ಧರ್ಮವನ್ನು ಪ್ರೀತಿಸಿ, ಗೌರವಿಸುವುದು ಆಗಿದೆ: ಪದ್ಮರಾಜ್ ಆರ್.

01/04/2024, 20:23

ಮಂಗಳೂರು(reporterkarnataka.com): ನಾನು ಹಿಂದೂ ಧರ್ಮದಲ್ಲಿ ಹುಟ್ಟಿದವ. ನಾನೊಬ್ಬ ಹಿಂದೂ ಎನ್ನಲು ಹೆಮ್ಮೆ ಇದೆ. ಹಿಂದೂ ಧರ್ಮದ ಆಚರಣೆಯನ್ನು ಮಾಡುತ್ತೇನೆ. ನಾನು ಕಲಿತ ಹಿಂದುತ್ವ ಎಂದರೇ ಇನ್ನೊಂದು ಜಾತಿ- ಧರ್ಮವನ್ನು ಪ್ರೀತಿಸಿ ಗೌರವಿಸುವುದು ಆಗಿದೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.
ಪುತ್ತೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ನಾನು ಹಿಂದುವಾದಿಯಾಗಿ ದೇವರ ಕಾರ್ಯವನ್ನು ನಡೆಸುತ್ತಿದ್ದೇನೆ ಎಂದು ನುಡಿದರು.
ನಮ್ಮ ಭಾರತವನ್ನು ಇತರೇ ದೇಶಗಳು ಗೌರವದಿಂದ ಪ್ರೀತಿಯಿಂದ ಕಾಣುತ್ತದೆ. ಯಾಕೆಂದರೆ ಭಾರತ ವಿವಿಧತೆಯಲ್ಲಿ ಏಕತೆ ಕಾಣುವ ರಾಷ್ಟ್ರ. ಸುಸಂಸ್ಕೃತ ದೇಶ, ಇಲ್ಲಿ ವಿವಿಧ ಜಾತಿ- ಧರ್ಮಗಳಿದ್ದರೂ, ಜಾತಿಗೆ ಸೀಮಿತವಾಗಿ ನಾವಿಲ್ಲ. ನಾವೆಲ್ಲರೂ ದೇವರ ಮಕ್ಕಳು ಎಂದು ಅವರು ಅವರು ನುಡಿದರು.
ಪದ್ಮರಾಜ್ ಅವರು ಪುತ್ತೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು