1:06 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ನಂತೂರು ಬಳಿ ರಸ್ತೆ ಮಧ್ಯೆ ಸಮಾಧಿ ತರಹ ತಲೆ ಎತ್ತಿರುವ ಡ್ರೈನೇಜ್ ಪಿಟ್: ಸ್ಕೂಟರ್ ಪಲ್ಟಿ; ಸವಾರ ಆಸ್ಪತ್ರೆಗೆ

07/11/2023, 23:45

ಮಂಗಳೂರು(reporterkarnataka.com): ನಗರದ ನಂತೂರು ಜಂಕ್ಷನ್ ಬಳಿ ಇಂದು ರಾತ್ರಿ ಸ್ಕೂಟರೊಂದು ಅವೈಜ್ಞಾನಿಕವಾಗಿ ನಿರ್ಮಿಸಿದ ಡ್ರೈನೇಜ್ ಪಿಟ್ ನಿಂದ ಅಪಘಾತಕ್ಕೀಡಾದ ಪರಿಣಾಮ ಸ್ಕೂಟರ್ ಸವಾರ ಯುವಕನೊಬ್ಬ ಗಾಯಗೊಂಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆದಾಖಲಿಸಲಾಗಿದೆ.


ಗಾಯಾಳುವನ್ನು ಶಿಫ್ಕಿ(21) ಎಂದು ಗುರುತಿಸಲಾಗಿದೆ. ಸ್ಕೂಟರ್ ಪಲ್ಟಿಯಾದ ಪರಿಣಾಮ ಯುವಕನ ಗಲ್ಲ, ಕೈ ಮತ್ತು ಕಾಲಿಗೆ ಗಾಯಗಳಾಗಿವೆ.
ಮಲ್ಲಿಕಟ್ಟೆ ಕಡೆಯಿಂದ ನಂತೂರು ಕಡೆಗೆ ಸಾಗುವ ಹಾದಿಯಲ್ಲಿ ನಂತೂರು ಬಸ್ ತಂಗುದಾಣದ ಸಮೀಪದಲ್ಲೇ ರಸ್ತೆ ಮಧ್ಯೆ ಈ ಡ್ರೈನೇಜ್ ಪಿಟ್ ಇದೆ. ಇದು ರಸ್ತೆ ಮಟ್ಟದಿಂದ ಎತ್ತರದಲ್ಲಿದ್ದು ದ್ವಿಚಕ್ರ ವಾಹನ ಸವಾರರಿಗೆ ಯಾವಾಗಲೂ ಅಪಾಯಕಾರಿಯಾಗಿದೆ. ಈ ಡ್ರೈನೇಜ್ ಪಿಟ್ ರಸ್ತೆ ಮಧ್ಯದಲ್ಲಿ ಸಮಾಧಿ ತರಹ ಎದ್ದು ಕಾಣುತ್ತದೆ. ಈ ರಸ್ತೆಯಲ್ಲಿ ದಿನಾಲೂ ಸಂಚರಿಸುವವರು ಸ್ವಲ್ಪ ಜಾಗರೂಕತೆ ವಹಿಸಿ ಇದರ ಮೇಲೆ ತಮ್ಮ ವಾಹನಗಳ ಚಕ್ರವನ್ನೇರಿಸುತ್ತಾರೆ. ಆದರೆ ಹೊಸ ಸವಾರರಿಗೆ ಇದು ಹೊಸತಾಗಿರುವುದರಿಂದ ಅಪಾಯಕಾರಿಯಾಗಿದೆ. ಇವತ್ತು ನಡೆದದ್ದು ಕೂಡ ಇದೇ ಅಚಾತುರ್ಯ. ಸ್ಕೂಟರ್ ನಿಂದ ಸವಾರ ಎಸೆಯಲ್ಪಟ್ಟು ಗಲ್ಲ ಮತ್ತು ಕೈಕಾಲಿಗೆ ಗಾಯಗಳಾಗಿವೆ. ಗಾಯಾಳುವನ್ನು ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು