7:43 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ನಂತೂರು ಬಳಿ ರಸ್ತೆ ಮಧ್ಯೆ ಸಮಾಧಿ ತರಹ ತಲೆ ಎತ್ತಿರುವ ಡ್ರೈನೇಜ್ ಪಿಟ್: ಸ್ಕೂಟರ್ ಪಲ್ಟಿ; ಸವಾರ ಆಸ್ಪತ್ರೆಗೆ

07/11/2023, 23:45

ಮಂಗಳೂರು(reporterkarnataka.com): ನಗರದ ನಂತೂರು ಜಂಕ್ಷನ್ ಬಳಿ ಇಂದು ರಾತ್ರಿ ಸ್ಕೂಟರೊಂದು ಅವೈಜ್ಞಾನಿಕವಾಗಿ ನಿರ್ಮಿಸಿದ ಡ್ರೈನೇಜ್ ಪಿಟ್ ನಿಂದ ಅಪಘಾತಕ್ಕೀಡಾದ ಪರಿಣಾಮ ಸ್ಕೂಟರ್ ಸವಾರ ಯುವಕನೊಬ್ಬ ಗಾಯಗೊಂಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆದಾಖಲಿಸಲಾಗಿದೆ.


ಗಾಯಾಳುವನ್ನು ಶಿಫ್ಕಿ(21) ಎಂದು ಗುರುತಿಸಲಾಗಿದೆ. ಸ್ಕೂಟರ್ ಪಲ್ಟಿಯಾದ ಪರಿಣಾಮ ಯುವಕನ ಗಲ್ಲ, ಕೈ ಮತ್ತು ಕಾಲಿಗೆ ಗಾಯಗಳಾಗಿವೆ.
ಮಲ್ಲಿಕಟ್ಟೆ ಕಡೆಯಿಂದ ನಂತೂರು ಕಡೆಗೆ ಸಾಗುವ ಹಾದಿಯಲ್ಲಿ ನಂತೂರು ಬಸ್ ತಂಗುದಾಣದ ಸಮೀಪದಲ್ಲೇ ರಸ್ತೆ ಮಧ್ಯೆ ಈ ಡ್ರೈನೇಜ್ ಪಿಟ್ ಇದೆ. ಇದು ರಸ್ತೆ ಮಟ್ಟದಿಂದ ಎತ್ತರದಲ್ಲಿದ್ದು ದ್ವಿಚಕ್ರ ವಾಹನ ಸವಾರರಿಗೆ ಯಾವಾಗಲೂ ಅಪಾಯಕಾರಿಯಾಗಿದೆ. ಈ ಡ್ರೈನೇಜ್ ಪಿಟ್ ರಸ್ತೆ ಮಧ್ಯದಲ್ಲಿ ಸಮಾಧಿ ತರಹ ಎದ್ದು ಕಾಣುತ್ತದೆ. ಈ ರಸ್ತೆಯಲ್ಲಿ ದಿನಾಲೂ ಸಂಚರಿಸುವವರು ಸ್ವಲ್ಪ ಜಾಗರೂಕತೆ ವಹಿಸಿ ಇದರ ಮೇಲೆ ತಮ್ಮ ವಾಹನಗಳ ಚಕ್ರವನ್ನೇರಿಸುತ್ತಾರೆ. ಆದರೆ ಹೊಸ ಸವಾರರಿಗೆ ಇದು ಹೊಸತಾಗಿರುವುದರಿಂದ ಅಪಾಯಕಾರಿಯಾಗಿದೆ. ಇವತ್ತು ನಡೆದದ್ದು ಕೂಡ ಇದೇ ಅಚಾತುರ್ಯ. ಸ್ಕೂಟರ್ ನಿಂದ ಸವಾರ ಎಸೆಯಲ್ಪಟ್ಟು ಗಲ್ಲ ಮತ್ತು ಕೈಕಾಲಿಗೆ ಗಾಯಗಳಾಗಿವೆ. ಗಾಯಾಳುವನ್ನು ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು