2:05 AM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ನಂತೂರು ಜಂಕ್ಷನ್: ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸ್ಥಳದಲ್ಲೇ ದಾರುಣ ಸಾವು

30/07/2024, 22:15

ಮಂಗಳೂರು(reporterkarnataka.com):ಎನ್‌ಎಚ್66ರಲ್ಲಿ ಟ್ಯಾಂಕರ್ ವೊಂದು ಸ್ಕೂಟರ್ ಮೇಲೆ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಪದವು-ಜಂಕ್ಷನ್ ನಡುವೆ ಇಂದು ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಎಂದು ಗುರುತಿಸಲಾಗಿದೆ.
ಅಡ್ಯಾರ್ ಕಣ್ಣೂರಿನಲ್ಲಿ ವಾಚ್‌ಗಳ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು ಅವರು ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಟ್ಯಾಂಕರ್ ಲಾರಿಯು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಶೆಟ್ಟಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆದರೆ ಟ್ಯಾಂಕರ್ ನಿಲ್ಲದೆ ಚಕ್ರ ಅವರ ತಲೆಯ ಮೇಲೆಯೇ ಹರಿದ ಪರಿಣಾಮ ಶಿವಾನಂದ ಶೆಟ್ಟಿಯವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಸ್ಥಳದಲ್ಲಿ ಅಂಥಹ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು