7:09 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂತೂರು ಜಂಕ್ಷನ್: ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸ್ಥಳದಲ್ಲೇ ದಾರುಣ ಸಾವು

30/07/2024, 22:15

ಮಂಗಳೂರು(reporterkarnataka.com):ಎನ್‌ಎಚ್66ರಲ್ಲಿ ಟ್ಯಾಂಕರ್ ವೊಂದು ಸ್ಕೂಟರ್ ಮೇಲೆ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಪದವು-ಜಂಕ್ಷನ್ ನಡುವೆ ಇಂದು ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಎಂದು ಗುರುತಿಸಲಾಗಿದೆ.
ಅಡ್ಯಾರ್ ಕಣ್ಣೂರಿನಲ್ಲಿ ವಾಚ್‌ಗಳ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು ಅವರು ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಟ್ಯಾಂಕರ್ ಲಾರಿಯು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಶೆಟ್ಟಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆದರೆ ಟ್ಯಾಂಕರ್ ನಿಲ್ಲದೆ ಚಕ್ರ ಅವರ ತಲೆಯ ಮೇಲೆಯೇ ಹರಿದ ಪರಿಣಾಮ ಶಿವಾನಂದ ಶೆಟ್ಟಿಯವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಸ್ಥಳದಲ್ಲಿ ಅಂಥಹ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು