7:11 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ನಂತೂರು ಜಂಕ್ಷನ್: ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸ್ಥಳದಲ್ಲೇ ದಾರುಣ ಸಾವು

30/07/2024, 22:15

ಮಂಗಳೂರು(reporterkarnataka.com):ಎನ್‌ಎಚ್66ರಲ್ಲಿ ಟ್ಯಾಂಕರ್ ವೊಂದು ಸ್ಕೂಟರ್ ಮೇಲೆ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಪದವು-ಜಂಕ್ಷನ್ ನಡುವೆ ಇಂದು ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಎಂದು ಗುರುತಿಸಲಾಗಿದೆ.
ಅಡ್ಯಾರ್ ಕಣ್ಣೂರಿನಲ್ಲಿ ವಾಚ್‌ಗಳ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು ಅವರು ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಟ್ಯಾಂಕರ್ ಲಾರಿಯು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಶೆಟ್ಟಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆದರೆ ಟ್ಯಾಂಕರ್ ನಿಲ್ಲದೆ ಚಕ್ರ ಅವರ ತಲೆಯ ಮೇಲೆಯೇ ಹರಿದ ಪರಿಣಾಮ ಶಿವಾನಂದ ಶೆಟ್ಟಿಯವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಸ್ಥಳದಲ್ಲಿ ಅಂಥಹ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು