1:48 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಂತೂರು ಜಂಕ್ಷನ್: ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸ್ಥಳದಲ್ಲೇ ದಾರುಣ ಸಾವು

30/07/2024, 22:15

ಮಂಗಳೂರು(reporterkarnataka.com):ಎನ್‌ಎಚ್66ರಲ್ಲಿ ಟ್ಯಾಂಕರ್ ವೊಂದು ಸ್ಕೂಟರ್ ಮೇಲೆ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಪದವು-ಜಂಕ್ಷನ್ ನಡುವೆ ಇಂದು ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಎಂದು ಗುರುತಿಸಲಾಗಿದೆ.
ಅಡ್ಯಾರ್ ಕಣ್ಣೂರಿನಲ್ಲಿ ವಾಚ್‌ಗಳ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು ಅವರು ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಟ್ಯಾಂಕರ್ ಲಾರಿಯು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಶೆಟ್ಟಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆದರೆ ಟ್ಯಾಂಕರ್ ನಿಲ್ಲದೆ ಚಕ್ರ ಅವರ ತಲೆಯ ಮೇಲೆಯೇ ಹರಿದ ಪರಿಣಾಮ ಶಿವಾನಂದ ಶೆಟ್ಟಿಯವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಸ್ಥಳದಲ್ಲಿ ಅಂಥಹ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು