2:00 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ನಂತೂರು ಜಂಕ್ಷನ್: ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸ್ಥಳದಲ್ಲೇ ದಾರುಣ ಸಾವು

30/07/2024, 22:15

ಮಂಗಳೂರು(reporterkarnataka.com):ಎನ್‌ಎಚ್66ರಲ್ಲಿ ಟ್ಯಾಂಕರ್ ವೊಂದು ಸ್ಕೂಟರ್ ಮೇಲೆ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಪದವು-ಜಂಕ್ಷನ್ ನಡುವೆ ಇಂದು ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಎಂದು ಗುರುತಿಸಲಾಗಿದೆ.
ಅಡ್ಯಾರ್ ಕಣ್ಣೂರಿನಲ್ಲಿ ವಾಚ್‌ಗಳ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು ಅವರು ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಟ್ಯಾಂಕರ್ ಲಾರಿಯು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಶೆಟ್ಟಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆದರೆ ಟ್ಯಾಂಕರ್ ನಿಲ್ಲದೆ ಚಕ್ರ ಅವರ ತಲೆಯ ಮೇಲೆಯೇ ಹರಿದ ಪರಿಣಾಮ ಶಿವಾನಂದ ಶೆಟ್ಟಿಯವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಸ್ಥಳದಲ್ಲಿ ಅಂಥಹ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು