8:58 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ನಾಣ್ಯಾಪುರ: ಸೂಲಗಿತ್ತಿ ಪುರಕಲ್ ದುರುಗಮ್ಮ ಹಾಗೂ ನಾಟಿ ವೈದ್ಯ ಗೊಲ್ಲರ ಚೆನ್ನಜ್ಜರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಸನ್ಮಾನ

28/08/2021, 20:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ನಾಣ್ಯಾಪುರ ಗ್ರಾಮದಲ್ಲಿ, ಹಲವು ದಶಕಗಳಿಂದ ನಿರಂತರವಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹಿರಿಯರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಅವರ ಜೀವಮಾನದ ಸಮಾಜ ಸೇವೆಯನ್ನು

ಪರಿಗಣಿಸಿ, ಅವರನ್ನು ಅಭಿನಂದಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಿತು.
ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಮಾತನಾಡಿ, 85 ವಸಂತಗಳನ್ನು ಕಂಡಿರುವ ಗ್ರಾಮದ ಹಿರಿಯಜ್ಜಿ ನಾಣ್ಯಾಪುರ ಗ್ರಾಮದ ಪುರಕಲ್ ದುರುಗಮ್ಮ,ತನ್ನ ಆರು ದಶಕಗಳನ್ನು ಉಚಿತವಾಗಿ ಸೂಲಗಿತ್ತಿ ಸೇವಕಿಯಾಗಿ ಸಮಾಜ ಸೇವೆಯಿಂದ ಗರುತಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

65 ವರ್ಷಗಳನ್ನು ಕಂಡಿರುವ ಗೊಲ್ಲರ ಚೆನ್ನಜ್ಜ ಮೂಲತಃ ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ ಯವರಾಗಿದ್ದು, ಇವರು ಕೆಲ ವರ್ಷಗಳಿಂದ ನಾಣ್ಯಾಪುರ ಗ್ರಾಮದಲ್ಲಿ ನೆಲೆಸಿದ್ದಾರೆ. ಇವರು ತಮ್ಮ ಬಹುತೇಕ ಆಯುಷ್ಯವನ್ನು ಉಚಿತ ನಾಟಿ ವೈದ್ಯ ಚಿಕಿತ್ಸೆಗಾಗಿ ಮೀಸಲಿರಿಸಿಕೊಂಡಿದ್ದಾರೆ. ಹತ್ತಾರು  ಗಂಭೀರ ಕಾಯಿಲೆಗಳು ಸೇರಿದಂತೆ ನೂರಾರು ಖಾಯಿಲೆಗಳಿಗೆ ಉಚಿತವಾಗಿ ನಾಟಿ ಔಷಧಿ ನೀಡುತ್ತಿದ್ದಾರೆ. ಇವರಿಬ್ಬರೂ ನಾಣ್ಯಾಪುರ ಗ್ರಾಮದ ಬೆಲೆ ಕಟ್ಟದಂತಹ ಆಸ್ಥಿಯಾಗಿದ್ದಾರೆ ಎಂದು ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ನುಡಿದರು.

ಅವರಿಬ್ಬರಿಗೆ ವೇದಿಕೆ ವತಿಯಿಂದ ಜಿಲ್ಲಾಮಟ್ಟದ ಪ್ರಶಸ್ತಿ ನೀಡಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ವಂದೇ  ಮಾತರಂ ಜಾಗೃತಿ ವೇದಿಕೆ ಮುಖಂಡ ಹಾಗೂ ಗ್ರಾಮದ ವಾಲ್ಮೀಕಿ ಯುವ ಮುಖಂಡ ದಿಬ್ಬದಳ್ಳಿ ಮಲ್ಲಪ್ಪ ಸೇರಿದಂತೆ ಗ್ರಾಮದ ಹಿರಿಯರು ಮತ್ತು ಮಹಿಳೆಯರು ವಿವಿದ ಸಂಘ ಸಂಸ್ಥೆ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು