7:29 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ನಾಣ್ಯಾಪುರ: ಸೂಲಗಿತ್ತಿ ಪುರಕಲ್ ದುರುಗಮ್ಮ ಹಾಗೂ ನಾಟಿ ವೈದ್ಯ ಗೊಲ್ಲರ ಚೆನ್ನಜ್ಜರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಸನ್ಮಾನ

28/08/2021, 20:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ನಾಣ್ಯಾಪುರ ಗ್ರಾಮದಲ್ಲಿ, ಹಲವು ದಶಕಗಳಿಂದ ನಿರಂತರವಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹಿರಿಯರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಅವರ ಜೀವಮಾನದ ಸಮಾಜ ಸೇವೆಯನ್ನು

ಪರಿಗಣಿಸಿ, ಅವರನ್ನು ಅಭಿನಂದಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಿತು.
ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಮಾತನಾಡಿ, 85 ವಸಂತಗಳನ್ನು ಕಂಡಿರುವ ಗ್ರಾಮದ ಹಿರಿಯಜ್ಜಿ ನಾಣ್ಯಾಪುರ ಗ್ರಾಮದ ಪುರಕಲ್ ದುರುಗಮ್ಮ,ತನ್ನ ಆರು ದಶಕಗಳನ್ನು ಉಚಿತವಾಗಿ ಸೂಲಗಿತ್ತಿ ಸೇವಕಿಯಾಗಿ ಸಮಾಜ ಸೇವೆಯಿಂದ ಗರುತಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

65 ವರ್ಷಗಳನ್ನು ಕಂಡಿರುವ ಗೊಲ್ಲರ ಚೆನ್ನಜ್ಜ ಮೂಲತಃ ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ ಯವರಾಗಿದ್ದು, ಇವರು ಕೆಲ ವರ್ಷಗಳಿಂದ ನಾಣ್ಯಾಪುರ ಗ್ರಾಮದಲ್ಲಿ ನೆಲೆಸಿದ್ದಾರೆ. ಇವರು ತಮ್ಮ ಬಹುತೇಕ ಆಯುಷ್ಯವನ್ನು ಉಚಿತ ನಾಟಿ ವೈದ್ಯ ಚಿಕಿತ್ಸೆಗಾಗಿ ಮೀಸಲಿರಿಸಿಕೊಂಡಿದ್ದಾರೆ. ಹತ್ತಾರು  ಗಂಭೀರ ಕಾಯಿಲೆಗಳು ಸೇರಿದಂತೆ ನೂರಾರು ಖಾಯಿಲೆಗಳಿಗೆ ಉಚಿತವಾಗಿ ನಾಟಿ ಔಷಧಿ ನೀಡುತ್ತಿದ್ದಾರೆ. ಇವರಿಬ್ಬರೂ ನಾಣ್ಯಾಪುರ ಗ್ರಾಮದ ಬೆಲೆ ಕಟ್ಟದಂತಹ ಆಸ್ಥಿಯಾಗಿದ್ದಾರೆ ಎಂದು ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ನುಡಿದರು.

ಅವರಿಬ್ಬರಿಗೆ ವೇದಿಕೆ ವತಿಯಿಂದ ಜಿಲ್ಲಾಮಟ್ಟದ ಪ್ರಶಸ್ತಿ ನೀಡಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ವಂದೇ  ಮಾತರಂ ಜಾಗೃತಿ ವೇದಿಕೆ ಮುಖಂಡ ಹಾಗೂ ಗ್ರಾಮದ ವಾಲ್ಮೀಕಿ ಯುವ ಮುಖಂಡ ದಿಬ್ಬದಳ್ಳಿ ಮಲ್ಲಪ್ಪ ಸೇರಿದಂತೆ ಗ್ರಾಮದ ಹಿರಿಯರು ಮತ್ತು ಮಹಿಳೆಯರು ವಿವಿದ ಸಂಘ ಸಂಸ್ಥೆ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು