5:14 AM Thursday29 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ನಾಣ್ಯಾಪುರ: ಸೂಲಗಿತ್ತಿ ಪುರಕಲ್ ದುರುಗಮ್ಮ ಹಾಗೂ ನಾಟಿ ವೈದ್ಯ ಗೊಲ್ಲರ ಚೆನ್ನಜ್ಜರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಸನ್ಮಾನ

28/08/2021, 20:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ನಾಣ್ಯಾಪುರ ಗ್ರಾಮದಲ್ಲಿ, ಹಲವು ದಶಕಗಳಿಂದ ನಿರಂತರವಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹಿರಿಯರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಅವರ ಜೀವಮಾನದ ಸಮಾಜ ಸೇವೆಯನ್ನು

ಪರಿಗಣಿಸಿ, ಅವರನ್ನು ಅಭಿನಂದಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಿತು.
ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಮಾತನಾಡಿ, 85 ವಸಂತಗಳನ್ನು ಕಂಡಿರುವ ಗ್ರಾಮದ ಹಿರಿಯಜ್ಜಿ ನಾಣ್ಯಾಪುರ ಗ್ರಾಮದ ಪುರಕಲ್ ದುರುಗಮ್ಮ,ತನ್ನ ಆರು ದಶಕಗಳನ್ನು ಉಚಿತವಾಗಿ ಸೂಲಗಿತ್ತಿ ಸೇವಕಿಯಾಗಿ ಸಮಾಜ ಸೇವೆಯಿಂದ ಗರುತಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

65 ವರ್ಷಗಳನ್ನು ಕಂಡಿರುವ ಗೊಲ್ಲರ ಚೆನ್ನಜ್ಜ ಮೂಲತಃ ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ ಯವರಾಗಿದ್ದು, ಇವರು ಕೆಲ ವರ್ಷಗಳಿಂದ ನಾಣ್ಯಾಪುರ ಗ್ರಾಮದಲ್ಲಿ ನೆಲೆಸಿದ್ದಾರೆ. ಇವರು ತಮ್ಮ ಬಹುತೇಕ ಆಯುಷ್ಯವನ್ನು ಉಚಿತ ನಾಟಿ ವೈದ್ಯ ಚಿಕಿತ್ಸೆಗಾಗಿ ಮೀಸಲಿರಿಸಿಕೊಂಡಿದ್ದಾರೆ. ಹತ್ತಾರು  ಗಂಭೀರ ಕಾಯಿಲೆಗಳು ಸೇರಿದಂತೆ ನೂರಾರು ಖಾಯಿಲೆಗಳಿಗೆ ಉಚಿತವಾಗಿ ನಾಟಿ ಔಷಧಿ ನೀಡುತ್ತಿದ್ದಾರೆ. ಇವರಿಬ್ಬರೂ ನಾಣ್ಯಾಪುರ ಗ್ರಾಮದ ಬೆಲೆ ಕಟ್ಟದಂತಹ ಆಸ್ಥಿಯಾಗಿದ್ದಾರೆ ಎಂದು ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ನುಡಿದರು.

ಅವರಿಬ್ಬರಿಗೆ ವೇದಿಕೆ ವತಿಯಿಂದ ಜಿಲ್ಲಾಮಟ್ಟದ ಪ್ರಶಸ್ತಿ ನೀಡಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ವಂದೇ  ಮಾತರಂ ಜಾಗೃತಿ ವೇದಿಕೆ ಮುಖಂಡ ಹಾಗೂ ಗ್ರಾಮದ ವಾಲ್ಮೀಕಿ ಯುವ ಮುಖಂಡ ದಿಬ್ಬದಳ್ಳಿ ಮಲ್ಲಪ್ಪ ಸೇರಿದಂತೆ ಗ್ರಾಮದ ಹಿರಿಯರು ಮತ್ತು ಮಹಿಳೆಯರು ವಿವಿದ ಸಂಘ ಸಂಸ್ಥೆ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು