9:59 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ನಾಣ್ಯಾಪುರ: ಸೂಲಗಿತ್ತಿ ಪುರಕಲ್ ದುರುಗಮ್ಮ ಹಾಗೂ ನಾಟಿ ವೈದ್ಯ ಗೊಲ್ಲರ ಚೆನ್ನಜ್ಜರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಸನ್ಮಾನ

28/08/2021, 20:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ನಾಣ್ಯಾಪುರ ಗ್ರಾಮದಲ್ಲಿ, ಹಲವು ದಶಕಗಳಿಂದ ನಿರಂತರವಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹಿರಿಯರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಅವರ ಜೀವಮಾನದ ಸಮಾಜ ಸೇವೆಯನ್ನು

ಪರಿಗಣಿಸಿ, ಅವರನ್ನು ಅಭಿನಂದಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಿತು.
ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಮಾತನಾಡಿ, 85 ವಸಂತಗಳನ್ನು ಕಂಡಿರುವ ಗ್ರಾಮದ ಹಿರಿಯಜ್ಜಿ ನಾಣ್ಯಾಪುರ ಗ್ರಾಮದ ಪುರಕಲ್ ದುರುಗಮ್ಮ,ತನ್ನ ಆರು ದಶಕಗಳನ್ನು ಉಚಿತವಾಗಿ ಸೂಲಗಿತ್ತಿ ಸೇವಕಿಯಾಗಿ ಸಮಾಜ ಸೇವೆಯಿಂದ ಗರುತಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

65 ವರ್ಷಗಳನ್ನು ಕಂಡಿರುವ ಗೊಲ್ಲರ ಚೆನ್ನಜ್ಜ ಮೂಲತಃ ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ ಯವರಾಗಿದ್ದು, ಇವರು ಕೆಲ ವರ್ಷಗಳಿಂದ ನಾಣ್ಯಾಪುರ ಗ್ರಾಮದಲ್ಲಿ ನೆಲೆಸಿದ್ದಾರೆ. ಇವರು ತಮ್ಮ ಬಹುತೇಕ ಆಯುಷ್ಯವನ್ನು ಉಚಿತ ನಾಟಿ ವೈದ್ಯ ಚಿಕಿತ್ಸೆಗಾಗಿ ಮೀಸಲಿರಿಸಿಕೊಂಡಿದ್ದಾರೆ. ಹತ್ತಾರು  ಗಂಭೀರ ಕಾಯಿಲೆಗಳು ಸೇರಿದಂತೆ ನೂರಾರು ಖಾಯಿಲೆಗಳಿಗೆ ಉಚಿತವಾಗಿ ನಾಟಿ ಔಷಧಿ ನೀಡುತ್ತಿದ್ದಾರೆ. ಇವರಿಬ್ಬರೂ ನಾಣ್ಯಾಪುರ ಗ್ರಾಮದ ಬೆಲೆ ಕಟ್ಟದಂತಹ ಆಸ್ಥಿಯಾಗಿದ್ದಾರೆ ಎಂದು ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ನುಡಿದರು.

ಅವರಿಬ್ಬರಿಗೆ ವೇದಿಕೆ ವತಿಯಿಂದ ಜಿಲ್ಲಾಮಟ್ಟದ ಪ್ರಶಸ್ತಿ ನೀಡಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ವಂದೇ  ಮಾತರಂ ಜಾಗೃತಿ ವೇದಿಕೆ ಮುಖಂಡ ಹಾಗೂ ಗ್ರಾಮದ ವಾಲ್ಮೀಕಿ ಯುವ ಮುಖಂಡ ದಿಬ್ಬದಳ್ಳಿ ಮಲ್ಲಪ್ಪ ಸೇರಿದಂತೆ ಗ್ರಾಮದ ಹಿರಿಯರು ಮತ್ತು ಮಹಿಳೆಯರು ವಿವಿದ ಸಂಘ ಸಂಸ್ಥೆ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು