4:21 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ನಾಪತ್ತೆಯಾಗಿದ್ದ ಮೂಡುಬೆಳ್ಳೆಯ ಯುವತಿಯ ಶವ ಪಡುಬೆಳ್ಳೆಯ ನದಿಯಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ

13/10/2023, 16:03

ಕಾರ್ಕಳ(reporterkarnataka.com): ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂಡುಬೆಳ್ಳೆ ಕೊಂಗಿಬೈಲಿನ ಯುವತಿಯೊಬ್ಬಳ ಶವ ಪಾಪನಾಶಿನಿ ನದಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22)
ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದರು.
ಅ. 9ರಂದು ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೋದವರು ವಾಪಸ್ ಬರಲಿಲ್ಲ. ಶಿರ್ವ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಬಿಕಾಂ ಪದವೀಧರೆಯಾಗಿದ್ದ ವಿನಿತಾ ಉಡುಪಿ ಎಂಜಿಎಂ ಕಾಲೇಜು ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂಗೆ ಸುಮಾರು 4 ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದರು. ವಾರದ ಹಿಂದೆ ಕೆಲಸಬಿಟ್ಟಿದ್ದರು.
ವಿನಿತಾ ನಾಪತ್ತೆಯಾದ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮನೆಯವರು ಸಂಬಂಧಿಕರ, ಸ್ನೇಹಿತರ ಮನೆ, ಅಸುಪಾಸಿನಲ್ಲಿ ಹುಡುಕಾಟ ನಡೆಸಿದ್ದರು.
ಇದೀಗ ಮೃತದೇಹ ಮೃತದೇಹ
ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಪಾಪನಾಶಿನಿ ನದಿ ಗುಂಡಿಯಲ್ಲಿ ಪತ್ತೆಯಾಗಿದೆ. ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು