12:25 PM Sunday18 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಾರಾಯಣಗುರು ಜಯಂತಿ ವಿಶೇಷ ಉಪನ್ಯಾಸ

11/09/2025, 22:09

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ಆಶ್ರಯದಲ್ಲಿ ನಾರಾಯಣಗುರು ಜಯಂತಿ – 2025 ಗುರುವಾರ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಚರಿಸಲಾಯಿತು.


ಆಶೀರ್ವಚನವನ್ನು ನೀಡಿದ ಆರ್ಯ ಈಡಿಗ ಮಹಾಸಂಸ್ಥಾನ, ಸೋಲೂರಿನ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು ಮಾತನಾಡಿ, ನಾರಾಯಣ ಗುರುಗಳು ಯಾವುದನ್ನೂ ಬಯಸಲಿಲ್ಲ, ತನ್ನ ಸರ್ವಸ್ವವನ್ನೂ ಸಮಾಜಕ್ಕಾಗಿ ಧಾರೆಯೆರೆದವರು, ಯಾವುದೆ ಪ್ರತಿಭಟನೆ, ಜಗಳವಿರದೇ ಜನರನ್ನು ಪರಿವರ್ತಿಸುವ ಕಾರ್ಯವನ್ನು ಗುರುಗಳು ಮಾಡಿದರು.ದಲಿತರನ್ನು ನೂರು ಮೈಲಿ ದೂರ ಇಡುತ್ತಿದ್ದ ಕಾಲದಲ್ಲಿ, ನಾರಾಯಣಗುರು ಅವರಂತವರು ಆ ಮಕ್ಕಳನ್ನು ತಮ್ಮ ಮಡಿಲಲ್ಲಿ ಕೂಸಿನಂತೆ ಕೂರಿಸಿಕೊಂಡು ಪ್ರಾರ್ಥನೆ ಹೇಳಿಕೊಡುತ್ತಿದ್ದರು. “ದೇವಾಲಯಕ್ಕೆ ಪ್ರವೇಶವಿಲ್ಲ” ಎಂದು ತಡೆದಾಗ, ಅವರು ನದಿಗೆ ಹಾರಿ ಶಿವಲಿಂಗ ತಂದು ಕಣ್ಣೀರಿನಿಂದ ಅಭಿಷೇಕ ಮಾಡಿ ಪ್ರತಿಷ್ಠಾಪನೆ ಮಾಡಿದರು. ಇದರಿಂದ ದೇವರು ಎಲ್ಲರಿಗೂ ಸಮಾನವಾಗಿ ಲಭ್ಯ ಎಂಬ ಸಂದೇಶವನ್ನು ನೀಡಿದ್ದಾರೆ. ಆ ಮೂಲಕ ಸಮಾಜದಲ್ಲಿ ಸಮಾನತೆಯ ಬೆಳಕನ್ನು ಹರಿಸಿದರು ಎಂದರು.
ಶ್ರೀಲಂಕಾಕ್ಕೆ ತೆರಳಿದ ಸಂದರ್ಭ ಜನರು ಬಡವರೆಂದು ಗೋಗರೆದಾಗ ರಾತ್ರಿ ಶಾಲೆ ಆರಂಭಿಸುವಂತೆ ಕರೆ ನೀಡಿದರು ಈ ಸಂದರ್ಭ ಹಲವಾರು ರಾತ್ರಿ ಶಾಲೆ ಆರಂಭಗೊಂಡಿತು. ಆ ಬಳಿಕ ಬ್ರಿಟಿಷರ ಫ್ಯಾಕ್ಟರಿಗಳಲ್ಲಿ ಕೆಲಸ ಸಿಕ್ಕಿತು. ಈ ಮೂಲಕ ಶಿಕ್ಷಣಕ್ಕೂ ಅಪಾರ ಪ್ರಾಮುಖ್ಯತೆ ನೀಡಿದ್ದರು ಎಂದರು.
ಈ ಸಂದರ್ಭದಲ್ಲಿ “ವಿಶ್ವದ ಸಂತಸತ್ವ ನಾರಾಯಣಗುರು” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ನಿಕಟಪೂರ್ವ ನಿರ್ದೇಶಕರಾದ ಡಾ. ಗಣೇಶ ಅಮೀನ್ ಸಂಕಮಾರ್ ನೀಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸಿದರು. ಪ್ರೊ. ಗಣಪತಿ ಗೌಡ ಎಸ್.(ಪ್ರಾಂಶುಪಾಲರು), ಡಾ. ಜಯರಾಜ್ ಎನ್. (ನಿರ್ದೇಶಕರು) ಹಾಗೂ ರಾಜು ಮೊಗವೀರ ಕೆ.ಕೆ.ಎ.ಎಸ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು