6:34 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಾರಾಯಣಗುರು ಜಯಂತಿ ವಿಶೇಷ ಉಪನ್ಯಾಸ

11/09/2025, 22:09

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ಆಶ್ರಯದಲ್ಲಿ ನಾರಾಯಣಗುರು ಜಯಂತಿ – 2025 ಗುರುವಾರ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಚರಿಸಲಾಯಿತು.


ಆಶೀರ್ವಚನವನ್ನು ನೀಡಿದ ಆರ್ಯ ಈಡಿಗ ಮಹಾಸಂಸ್ಥಾನ, ಸೋಲೂರಿನ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು ಮಾತನಾಡಿ, ನಾರಾಯಣ ಗುರುಗಳು ಯಾವುದನ್ನೂ ಬಯಸಲಿಲ್ಲ, ತನ್ನ ಸರ್ವಸ್ವವನ್ನೂ ಸಮಾಜಕ್ಕಾಗಿ ಧಾರೆಯೆರೆದವರು, ಯಾವುದೆ ಪ್ರತಿಭಟನೆ, ಜಗಳವಿರದೇ ಜನರನ್ನು ಪರಿವರ್ತಿಸುವ ಕಾರ್ಯವನ್ನು ಗುರುಗಳು ಮಾಡಿದರು.ದಲಿತರನ್ನು ನೂರು ಮೈಲಿ ದೂರ ಇಡುತ್ತಿದ್ದ ಕಾಲದಲ್ಲಿ, ನಾರಾಯಣಗುರು ಅವರಂತವರು ಆ ಮಕ್ಕಳನ್ನು ತಮ್ಮ ಮಡಿಲಲ್ಲಿ ಕೂಸಿನಂತೆ ಕೂರಿಸಿಕೊಂಡು ಪ್ರಾರ್ಥನೆ ಹೇಳಿಕೊಡುತ್ತಿದ್ದರು. “ದೇವಾಲಯಕ್ಕೆ ಪ್ರವೇಶವಿಲ್ಲ” ಎಂದು ತಡೆದಾಗ, ಅವರು ನದಿಗೆ ಹಾರಿ ಶಿವಲಿಂಗ ತಂದು ಕಣ್ಣೀರಿನಿಂದ ಅಭಿಷೇಕ ಮಾಡಿ ಪ್ರತಿಷ್ಠಾಪನೆ ಮಾಡಿದರು. ಇದರಿಂದ ದೇವರು ಎಲ್ಲರಿಗೂ ಸಮಾನವಾಗಿ ಲಭ್ಯ ಎಂಬ ಸಂದೇಶವನ್ನು ನೀಡಿದ್ದಾರೆ. ಆ ಮೂಲಕ ಸಮಾಜದಲ್ಲಿ ಸಮಾನತೆಯ ಬೆಳಕನ್ನು ಹರಿಸಿದರು ಎಂದರು.
ಶ್ರೀಲಂಕಾಕ್ಕೆ ತೆರಳಿದ ಸಂದರ್ಭ ಜನರು ಬಡವರೆಂದು ಗೋಗರೆದಾಗ ರಾತ್ರಿ ಶಾಲೆ ಆರಂಭಿಸುವಂತೆ ಕರೆ ನೀಡಿದರು ಈ ಸಂದರ್ಭ ಹಲವಾರು ರಾತ್ರಿ ಶಾಲೆ ಆರಂಭಗೊಂಡಿತು. ಆ ಬಳಿಕ ಬ್ರಿಟಿಷರ ಫ್ಯಾಕ್ಟರಿಗಳಲ್ಲಿ ಕೆಲಸ ಸಿಕ್ಕಿತು. ಈ ಮೂಲಕ ಶಿಕ್ಷಣಕ್ಕೂ ಅಪಾರ ಪ್ರಾಮುಖ್ಯತೆ ನೀಡಿದ್ದರು ಎಂದರು.
ಈ ಸಂದರ್ಭದಲ್ಲಿ “ವಿಶ್ವದ ಸಂತಸತ್ವ ನಾರಾಯಣಗುರು” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ನಿಕಟಪೂರ್ವ ನಿರ್ದೇಶಕರಾದ ಡಾ. ಗಣೇಶ ಅಮೀನ್ ಸಂಕಮಾರ್ ನೀಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸಿದರು. ಪ್ರೊ. ಗಣಪತಿ ಗೌಡ ಎಸ್.(ಪ್ರಾಂಶುಪಾಲರು), ಡಾ. ಜಯರಾಜ್ ಎನ್. (ನಿರ್ದೇಶಕರು) ಹಾಗೂ ರಾಜು ಮೊಗವೀರ ಕೆ.ಕೆ.ಎ.ಎಸ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು