12:42 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ನರೇಗಾ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ: ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಶ್ರೀನಿವಾಸ ರೆಡ್ಡಿ ಅಮಾನತು

27/01/2024, 14:46

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನರೇಗಾದಲ್ಲಿ ಅವ್ಯವಹಾರ ಆರೋಪ ಸಂಬಂಧ ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಎಸ್.ಎಂ. ಶ್ರೀನಿವಾಸರೆಡ್ಡಿ ಹಾಗೂ ತಾಂತ್ರಿಕ ಸಹಾಯ ಸಿಬ್ಬಂದಿನ್ನು ಅಮಾನತುಗೊಳಿಸಲಾಗಿದೆ.
ನರೇಗಾ ಕಾಮಗಾರಿಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಕಾಮಗಾರಿ ನಡೆಸದೆ ಬಿಲ್ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸಂತಪ್ಪ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಕೊತ್ತಹುಡ್ಯ, ಬೈರಗಾನಹಳ್ಳಿ ಗ್ರಾಮದ ಗೋಮಾಳ ಸರ್ವೇ ನಂ 124 ರಲ್ಲಿ ಗೋಕುಂಟೆ ನಿರ್ಮಾಣ ಮಾಡಿದ್ದು, ಈ ಕಾಮಗಾರಿಗಳಲ್ಲಿ ನ್ಯೂನತೆ ಕಂಡಿಬಂದಿದ್ದ ಹಿನ್ನೆಲೆಯಲ್ಲಿ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗೆ ಸೂಚನೆ ನೀಡಿದ್ದರು.
ಉಪ ಕಾರ್ಯದರ್ಶಿ ತಂಡ ಕಾಮಗಾರಿ ಪರಿಶೀಲಿಸಿ ಹಾಗೂ ಕಾಮಗಾರಿಗಳ ಬಗ್ಗೆ ದಾಖಲೆ ಪರಿಶೀಲಿಸಿದ ವೇಳೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರಿಂದ ಕಾಮಗಾರಿಯನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಯಾವುದೇ ದಾಖಲೆಗಳು ಸಿಕ್ಕಿಲ್ಲ.
ಗೋಕುಂಟೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಅಳತೆ ಪರಿಶೀಲಿಸಿದಾಗ ಅಳತೆಯಲ್ಲಿ ವ್ಯತ್ಯಾಸವಿದ್ದು, ಕೂಲಿಯ ವೆಚ್ಚವನ್ನು ಪಾವತಿ ಮಾಡಿರುವುದು ಕಂಡುಬಂದಿರುತ್ತದೆ.
ಸದರಿ ಕಾಮಗಾರಿಗಳ ಅಂದಾಜು ಪಟ್ಟಿಗೂ, ಕಾಮಗಾರಿ ಅನುಷ್ಠಾನಕ್ಕೂ ಮತ್ತು ಅಳತೆ ಪುಸ್ತಕಕ್ಕೂ ಯಾವುದೇ ರೀತಿಯ ತಾಳೆಯಾಗದಿರುವುದು ಕಂಡು ಬಂದಿದೆ. ಮರಸನಪಲ್ಲಿ ಗ್ರಾಮ ಸತೀಶ್ ಜಮೀನಿನ ಕಾಲುವೆಯ ಕಾಮಗಾರಿಯಲ್ಲಿ ವ್ಯತ್ಯಾಸವಿರುವುದು ಗೊತ್ತಾಗಿದೆ.
ನ್ಯೂನತೆ ಸಂಬಂಧ ಸಮಾಜಾಯಿಷಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ಆದರೂ ಪೂರಕ ದಾಖಲೆ ನೀಡದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು