8:56 PM Friday15 - August 2025
ಬ್ರೇಕಿಂಗ್ ನ್ಯೂಸ್
ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ನರೇಗಾ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ: ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಶ್ರೀನಿವಾಸ ರೆಡ್ಡಿ ಅಮಾನತು

27/01/2024, 14:46

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನರೇಗಾದಲ್ಲಿ ಅವ್ಯವಹಾರ ಆರೋಪ ಸಂಬಂಧ ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಎಸ್.ಎಂ. ಶ್ರೀನಿವಾಸರೆಡ್ಡಿ ಹಾಗೂ ತಾಂತ್ರಿಕ ಸಹಾಯ ಸಿಬ್ಬಂದಿನ್ನು ಅಮಾನತುಗೊಳಿಸಲಾಗಿದೆ.
ನರೇಗಾ ಕಾಮಗಾರಿಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಕಾಮಗಾರಿ ನಡೆಸದೆ ಬಿಲ್ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸಂತಪ್ಪ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಕೊತ್ತಹುಡ್ಯ, ಬೈರಗಾನಹಳ್ಳಿ ಗ್ರಾಮದ ಗೋಮಾಳ ಸರ್ವೇ ನಂ 124 ರಲ್ಲಿ ಗೋಕುಂಟೆ ನಿರ್ಮಾಣ ಮಾಡಿದ್ದು, ಈ ಕಾಮಗಾರಿಗಳಲ್ಲಿ ನ್ಯೂನತೆ ಕಂಡಿಬಂದಿದ್ದ ಹಿನ್ನೆಲೆಯಲ್ಲಿ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗೆ ಸೂಚನೆ ನೀಡಿದ್ದರು.
ಉಪ ಕಾರ್ಯದರ್ಶಿ ತಂಡ ಕಾಮಗಾರಿ ಪರಿಶೀಲಿಸಿ ಹಾಗೂ ಕಾಮಗಾರಿಗಳ ಬಗ್ಗೆ ದಾಖಲೆ ಪರಿಶೀಲಿಸಿದ ವೇಳೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರಿಂದ ಕಾಮಗಾರಿಯನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಯಾವುದೇ ದಾಖಲೆಗಳು ಸಿಕ್ಕಿಲ್ಲ.
ಗೋಕುಂಟೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಅಳತೆ ಪರಿಶೀಲಿಸಿದಾಗ ಅಳತೆಯಲ್ಲಿ ವ್ಯತ್ಯಾಸವಿದ್ದು, ಕೂಲಿಯ ವೆಚ್ಚವನ್ನು ಪಾವತಿ ಮಾಡಿರುವುದು ಕಂಡುಬಂದಿರುತ್ತದೆ.
ಸದರಿ ಕಾಮಗಾರಿಗಳ ಅಂದಾಜು ಪಟ್ಟಿಗೂ, ಕಾಮಗಾರಿ ಅನುಷ್ಠಾನಕ್ಕೂ ಮತ್ತು ಅಳತೆ ಪುಸ್ತಕಕ್ಕೂ ಯಾವುದೇ ರೀತಿಯ ತಾಳೆಯಾಗದಿರುವುದು ಕಂಡು ಬಂದಿದೆ. ಮರಸನಪಲ್ಲಿ ಗ್ರಾಮ ಸತೀಶ್ ಜಮೀನಿನ ಕಾಲುವೆಯ ಕಾಮಗಾರಿಯಲ್ಲಿ ವ್ಯತ್ಯಾಸವಿರುವುದು ಗೊತ್ತಾಗಿದೆ.
ನ್ಯೂನತೆ ಸಂಬಂಧ ಸಮಾಜಾಯಿಷಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ಆದರೂ ಪೂರಕ ದಾಖಲೆ ನೀಡದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು