10:38 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ನರೇಗಾ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ: ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಶ್ರೀನಿವಾಸ ರೆಡ್ಡಿ ಅಮಾನತು

27/01/2024, 14:46

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನರೇಗಾದಲ್ಲಿ ಅವ್ಯವಹಾರ ಆರೋಪ ಸಂಬಂಧ ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಎಸ್.ಎಂ. ಶ್ರೀನಿವಾಸರೆಡ್ಡಿ ಹಾಗೂ ತಾಂತ್ರಿಕ ಸಹಾಯ ಸಿಬ್ಬಂದಿನ್ನು ಅಮಾನತುಗೊಳಿಸಲಾಗಿದೆ.
ನರೇಗಾ ಕಾಮಗಾರಿಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಕಾಮಗಾರಿ ನಡೆಸದೆ ಬಿಲ್ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸಂತಪ್ಪ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಕೊತ್ತಹುಡ್ಯ, ಬೈರಗಾನಹಳ್ಳಿ ಗ್ರಾಮದ ಗೋಮಾಳ ಸರ್ವೇ ನಂ 124 ರಲ್ಲಿ ಗೋಕುಂಟೆ ನಿರ್ಮಾಣ ಮಾಡಿದ್ದು, ಈ ಕಾಮಗಾರಿಗಳಲ್ಲಿ ನ್ಯೂನತೆ ಕಂಡಿಬಂದಿದ್ದ ಹಿನ್ನೆಲೆಯಲ್ಲಿ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗೆ ಸೂಚನೆ ನೀಡಿದ್ದರು.
ಉಪ ಕಾರ್ಯದರ್ಶಿ ತಂಡ ಕಾಮಗಾರಿ ಪರಿಶೀಲಿಸಿ ಹಾಗೂ ಕಾಮಗಾರಿಗಳ ಬಗ್ಗೆ ದಾಖಲೆ ಪರಿಶೀಲಿಸಿದ ವೇಳೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರಿಂದ ಕಾಮಗಾರಿಯನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಯಾವುದೇ ದಾಖಲೆಗಳು ಸಿಕ್ಕಿಲ್ಲ.
ಗೋಕುಂಟೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಅಳತೆ ಪರಿಶೀಲಿಸಿದಾಗ ಅಳತೆಯಲ್ಲಿ ವ್ಯತ್ಯಾಸವಿದ್ದು, ಕೂಲಿಯ ವೆಚ್ಚವನ್ನು ಪಾವತಿ ಮಾಡಿರುವುದು ಕಂಡುಬಂದಿರುತ್ತದೆ.
ಸದರಿ ಕಾಮಗಾರಿಗಳ ಅಂದಾಜು ಪಟ್ಟಿಗೂ, ಕಾಮಗಾರಿ ಅನುಷ್ಠಾನಕ್ಕೂ ಮತ್ತು ಅಳತೆ ಪುಸ್ತಕಕ್ಕೂ ಯಾವುದೇ ರೀತಿಯ ತಾಳೆಯಾಗದಿರುವುದು ಕಂಡು ಬಂದಿದೆ. ಮರಸನಪಲ್ಲಿ ಗ್ರಾಮ ಸತೀಶ್ ಜಮೀನಿನ ಕಾಲುವೆಯ ಕಾಮಗಾರಿಯಲ್ಲಿ ವ್ಯತ್ಯಾಸವಿರುವುದು ಗೊತ್ತಾಗಿದೆ.
ನ್ಯೂನತೆ ಸಂಬಂಧ ಸಮಾಜಾಯಿಷಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ಆದರೂ ಪೂರಕ ದಾಖಲೆ ನೀಡದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು