11:07 AM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ನರೇಗಾ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ: ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಶ್ರೀನಿವಾಸ ರೆಡ್ಡಿ ಅಮಾನತು

27/01/2024, 14:46

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನರೇಗಾದಲ್ಲಿ ಅವ್ಯವಹಾರ ಆರೋಪ ಸಂಬಂಧ ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಎಸ್.ಎಂ. ಶ್ರೀನಿವಾಸರೆಡ್ಡಿ ಹಾಗೂ ತಾಂತ್ರಿಕ ಸಹಾಯ ಸಿಬ್ಬಂದಿನ್ನು ಅಮಾನತುಗೊಳಿಸಲಾಗಿದೆ.
ನರೇಗಾ ಕಾಮಗಾರಿಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಕಾಮಗಾರಿ ನಡೆಸದೆ ಬಿಲ್ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸಂತಪ್ಪ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಕೊತ್ತಹುಡ್ಯ, ಬೈರಗಾನಹಳ್ಳಿ ಗ್ರಾಮದ ಗೋಮಾಳ ಸರ್ವೇ ನಂ 124 ರಲ್ಲಿ ಗೋಕುಂಟೆ ನಿರ್ಮಾಣ ಮಾಡಿದ್ದು, ಈ ಕಾಮಗಾರಿಗಳಲ್ಲಿ ನ್ಯೂನತೆ ಕಂಡಿಬಂದಿದ್ದ ಹಿನ್ನೆಲೆಯಲ್ಲಿ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗೆ ಸೂಚನೆ ನೀಡಿದ್ದರು.
ಉಪ ಕಾರ್ಯದರ್ಶಿ ತಂಡ ಕಾಮಗಾರಿ ಪರಿಶೀಲಿಸಿ ಹಾಗೂ ಕಾಮಗಾರಿಗಳ ಬಗ್ಗೆ ದಾಖಲೆ ಪರಿಶೀಲಿಸಿದ ವೇಳೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರಿಂದ ಕಾಮಗಾರಿಯನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಯಾವುದೇ ದಾಖಲೆಗಳು ಸಿಕ್ಕಿಲ್ಲ.
ಗೋಕುಂಟೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಅಳತೆ ಪರಿಶೀಲಿಸಿದಾಗ ಅಳತೆಯಲ್ಲಿ ವ್ಯತ್ಯಾಸವಿದ್ದು, ಕೂಲಿಯ ವೆಚ್ಚವನ್ನು ಪಾವತಿ ಮಾಡಿರುವುದು ಕಂಡುಬಂದಿರುತ್ತದೆ.
ಸದರಿ ಕಾಮಗಾರಿಗಳ ಅಂದಾಜು ಪಟ್ಟಿಗೂ, ಕಾಮಗಾರಿ ಅನುಷ್ಠಾನಕ್ಕೂ ಮತ್ತು ಅಳತೆ ಪುಸ್ತಕಕ್ಕೂ ಯಾವುದೇ ರೀತಿಯ ತಾಳೆಯಾಗದಿರುವುದು ಕಂಡು ಬಂದಿದೆ. ಮರಸನಪಲ್ಲಿ ಗ್ರಾಮ ಸತೀಶ್ ಜಮೀನಿನ ಕಾಲುವೆಯ ಕಾಮಗಾರಿಯಲ್ಲಿ ವ್ಯತ್ಯಾಸವಿರುವುದು ಗೊತ್ತಾಗಿದೆ.
ನ್ಯೂನತೆ ಸಂಬಂಧ ಸಮಾಜಾಯಿಷಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ಆದರೂ ಪೂರಕ ದಾಖಲೆ ನೀಡದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು