11:35 AM Wednesday23 - July 2025
ಬ್ರೇಕಿಂಗ್ ನ್ಯೂಸ್
ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ…

ಇತ್ತೀಚಿನ ಸುದ್ದಿ

ನರಿಕೊಂಬು ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಎಸ್ ಡಿಎಂಸಿ ಪ್ರಶಸ್ತಿ

29/03/2023, 10:00

ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಅತ್ಯುತ್ತಮ‌ ಎಸ್.ಡಿ.ಎಂ.ಸಿ. ಪ್ರಶಸ್ತಿಗೆ ನರಿಕೊಂಬು ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಆಯ್ಕೆಯಾಗಿದ್ದು, ಇತ್ತೀಚೆಗೆ ನೇರಳಕಟ್ಟೆಯಲ್ಲಿ ನಡೆದ ಜಿಲ್ಲಾಮಟ್ಟದ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ನರಿಕೊಂಬು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಸ್ವೀಕರಿಸಿದರು.
ಸರ್ಕಾರಿ ಶಾಲೆಯನ್ನು ಮಾದರಿಯಾದ ರೀತಿಯಲ್ಲಿ‌ ಅಭಿವೃದ್ದಿ ಗೊಳಿಸಿರುವುದು ಹಾಗೂ ಎಸ್ ಡಿ.ಎಂಸಿಯ ಕ್ರಿಯಾಶೀಲತೆಗೆ ಈ ಪ್ರಶಸ್ತಿ‌ ನೀಡಲಾಗಿದೆ. ಎಸ್.ಡಿ.ಎಂ.ಸಿ ಗೆ ದೊರೆತ ಪ್ರಶಸ್ತಿಯನ್ನು ಶಾಲೆಗೆ ಅರ್ಪಿಸುವ ಕಾರ್ಯಕ್ರಮವೂ ಅರ್ಥಪೂರ್ಣವಾಗಿ ನಡೆದಿದ್ದು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್ ನೇತೃತ್ವದಲ್ಲಿ ಸರ್ವ ಸದಸ್ಯರು ಶಾಲೆಗೆ ಆಗಮಿಸಿ ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಪ್ರಶಸ್ತಿ ಪುರಸ್ಕೃತ ಎಸ್ ಡಿಎಂಸಿ ಯನ್ನು ಬ್ಯಾಂಡ್ ವಾದ್ಯದ ಘೋಷಣೆಗಳೊಂದಿಗೆ ಶಾಲೆಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವೃಂದ ಸ್ವಾಗತಿಸಿ, ಪುಷ್ಪ ಸಿಂಚನದೊಂದಿಗೆ ವೇದಿಕೆಗೆ ಬರಮಾಡಿಕೊಂಡ ಕ್ಷಣ ಆತ್ಮೀಯತೆಯ ಜೊತೆಗೆ ಭಾವನಾತ್ಮಕವಾಗಿತ್ತು.ಈ ಸಂದರ್ಭದಲ್ಲಿ..
ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್, ಉಪಾಧ್ಯಕ್ಷೆ ಯಶೋಧ, ತಾಯಂದಿರ ಸಮಿತಿಯ ಅಧ್ಯಕ್ಷೆ, ನರಿಕೊಂಬು ಗ್ರಾಮ ಪಂಚಾಯತಿ ಸದಸ್ಯೆ ಉಷಾಲಾಕ್ಷಿ, ತಾಯಂದಿರ ಸಮಿತಿಯ ಉಪಾಧ್ಯಕ್ಷೆ ಮೇಘ, ಶಾಲಾ ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ, ಶಾಲೆಯ ಪೋಷಕ ಬಂಧುಗಳು, ವಿದ್ಯಾರ್ಥಿ ಸಮೂಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು