7:27 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ನರಿಕೊಂಬು: ಬೆಂಕಿ ಆಕಸ್ಮಿಕಕ್ಕೆ ಮನೆ ಭಸ್ಮ; ಬೈಕ್ ಅಗ್ನಿಗಾಹುತಿ; 5 ಲಕ್ಷಕ್ಕೂ ಹೆಚ್ಚು ನಷ್ಟ

08/09/2025, 22:40

ಜಯಾನಂದ ಪೆರಾಜೆ ಬಂಟ್ವಾಳ

info.reporterkarnata@gmail.com

ನರಿಕೊಂಬು ಗ್ರಾಮ ಬೋರುಗುಡ್ಡೆ ಎಂಬಲ್ಲಿ ಬೆಂಕಿ ಆಕಸ್ಮಿಕಕ್ಕೆ ಮನೆಯೊಂದು ಸುಟ್ಟು ಹೋಗಿದ್ದು, ಮನೆ ಎದುರು ನಿಲ್ಲಿಸಿದ್ದ ಬೈಕ್ ಅಗ್ನಿಗೆ ಆಹುತಿಯಾಗಿದೆ.


ಉಷಾ ರಮೇಶ್ ಅವರ ಮನೆಯಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ ಮನೆ ಹಿಂಬದಿ ಪೂರ್ಣ ಭಸ್ಮವಾಗಿದೆ. ಮನೆಯ ಎದುರು ಇದ್ದ ಬೈಕ್ ಬೆಂಕಿಯ ಬಿಸಿಯಿಂದ ಮೆಲ್ಟ್ ಆಗಿದೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿತ್ತು. ಅಷ್ಟರಲ್ಲಿ ಊರ ಮಂದಿ ನೀರು ಹಾಕಿ ಬೆಂಕಿ ಆರಿಸಿದ್ದರು. ಘಟನೆಯಲ್ಲಿ ಸುಮಾರು
5 ಲಕ್ಷ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.
ಕಂದಾಯ ಅಧಿಕಾರಿಗಳು, ಮಾಜಿ ಸಚಿವ ಬಿ. ರಮಾನಾಥ ರೈ ಸಹಿತ ಪ್ರಮುಖರು ಸ್ಥಳಕ್ಕೆ ಬಂದಿದ್ದರು.
ಮುಂಜಾನೆ ಪುರೋಹಿತ ಗಣೇಶ್ ಮಯ್ಯ ಅವರು ಪೂಜಾ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ದಟ್ಟ ಹೊಗೆ ಬೆಂಕಿಯನ್ನು ಕಂಡು ಹತ್ತಿರದ ಮನೆಯಲ್ಲಿ ಮಾಹಿತಿ ನೀಡಿದ್ದರು. ಅಷ್ಟರಲ್ಲಿ ಉಷಾ ಎದ್ದು ಹೊಗೆಯಿಂದ ಕೆಮ್ಮುತ್ತಾ ಹೊರಗೆ ಬಂದಿದ್ದರು.
ಅವರ ಪತಿ ಮೂರು ವರ್ಷಗಳ ಹಿಂದೆ ಹೃದಯಾಘಾತದಿಂದ ಮೃತರಾಗಿದ್ದರು.
ಮನೆಯಲ್ಲಿ ಪುತ್ರ ಮತ್ತು ಮೊಮ್ಮಗ ಇದ್ದರು. ಘಟನೆಗೆ ಸ್ಪಷ್ಟ ಕಾರಣ ತಿಳಿದಿಲ್ಲ. ಬಚ್ಚಲು ಮನೆ, ಹತ್ತಿರದ ಕೋಣೆಗಳ ವಿದ್ಯುತ್ ವಯರ್ ಬೆಂಕಿಯಿಂದ ಕರಕಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು