7:00 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ನಟ, ನಿರ್ದೇಶಕ‌ ಗುರುಪ್ರಸಾದ್ ನೇಣಿಗೆ ಶರಣು: ಅಪಾರ್ಟ್ ಮೆಂಟಿನಲ್ಲಿ ಆತ್ಮಹತ್ಯೆ

03/11/2024, 13:52

ಬೆಂಗಳೂರು(reporterkarnataka.com): ನಟ, ನಿರ್ದೇಶಕ ಗುರುಪ್ರಸಾದ್ ಅವರು ನಗರದ ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗುರುಪ್ರಸಾದ್ ಅವರು ನೇಣಿಗೆ ಶರಣಾಗಿದ್ದು ಯಾರಿಗೂ ಗೊತ್ತಿರಲಿಲ್ಲ. ಅಪಾರ್ಟ್ ಮೆಂಟ್ ನಲ್ಲಿ ವಾಸನೆ ಬಂದ ಬಳಿಕ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮಠ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಗುರುಪ್ರಸಾದ್ ಅವರು ಕೆಲವು ಚಲನಚಿತ್ರಗಳಲ್ಲಿ ನಟಿಸಿದ್ದರು.
ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿನಿಂದ ವಾಸ ಮಾಡುತ್ತಿದ್ದರು. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಪ. ಕೌಟುಂಬಿಕ ಕಲಹ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ.
1972ರಲ್ಲಿ ಕನಕಪುರದಲ್ಲಿ ಜನಿಸಿದ್ದ ಗುರುಪ್ರಸಾದ್ ಅವರು ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ರಂಗನಾಯಕ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಮಠ ಸಿನಿಮಾ ಅವರಿಗೆ ಹೆಸರು ತಂದು ಕೊಟ್ಟಿತ್ತು. ಬಿಗ್ ಬಾಸ್ ನಲ್ಲಿಯೂ ಸ್ಪರ್ಧಿಯಾಗಿದ್ದರು.
ಅವರ ಅಡೆಮಾ ಸಿನಿಮಾ ಶೂಟಿಂಗ್ ನಡೆಯುತಿತ್ತು.
ಡೆತ್ ನೋಟ್ ಬರೆದಿಟ್ಟಿದ್ದು, ಮಾಹಿತಿ ಇನ್ನು ಹೊರಬರಬೇಕಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು