10:49 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ನಟನೆ, ಗಾಯನ, ನೃತ್ಯದಲ್ಲಿ ಎತ್ತಿದ ಕೈ: ತುಳು ಕುವರಿ 11ರ ಹರೆಯದ ತೀರ್ಥ ಪೊಳಲಿ ಹುಲಿ ಕುಣಿತಕ್ಕೂ ಸೈ!

24/06/2021, 07:24

ಲತಾ ಎ. ಕಲ್ಲಡ್ಕ ಮಂಗಳೂರು

info.reporterkarnataka@gmail.com

ಆಕೆಗಿನ್ನೂ ಬರೇ 11ರ ಹರೆಯ. ಅರಳು ಹುರಿದಂತೆ ಮಾತನಾಡುವ ವಾಕ್ಚತುರ್ಯ. ನಟನೆ, ನೃತ್ಯ, ಗಾಯನ, ಛದ್ಮವೇಷ, ಏಕಪಾತ್ರ ಅಭಿನಯ, ಇಷ್ಟೇ ಅಲ್ಲದೆ ತುಳುನಾಡಿನ ಹೆಮ್ಮೆಯ ಹುಲಿ ಕಣಿತ… ಹೀಗೆ ಎಲ್ಲದರಲ್ಲೂ ಆಕೆ ಸೈ.


ಇವಳು ಬೇರೆ ಯಾರೂ ಅಲ್ಲ, ಮಂಗಳೂರು ಮತ್ತು ಬಂಟ್ವಾಳ ತಾಲೂಕಿಗೆ ಹೊಂದಿಕೊಂಡಿರುವ ಪೊಳಲಿಯ ಅಡ್ಡೂರು ಗ್ರಾಮದ ಪೊನ್ನೆಲದ ಪುತ್ರಿ ತೀರ್ಥ ಪೊಳಲಿ. 

ಈಕೆ ಪೊನ್ನೆಲದ ಕೃಷ್ಣ ಅಮೀನ್ ಹಾಗೂ ಪ್ರೇಮಾ ದಂಪತಿಯ ಮುದ್ದಿನ ಮಗಳು. ಗಂಜಿಮಠದ ರಾಜ್ ಅಕಾಡೆಮಿ ಸ್ಕೂಲ್ ನ 6ನೇ ತರಗತಿ ವಿದ್ಯಾರ್ಥಿನಿ.

‘ಪನೋಡ ಬೊಡ್ಚ’ ತುಳು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಈ ಪುಟ್ಟ ತಾರೆ, ತನ್ನ ಅಭಿನಯದ ಮೂಲಕ ತುಳುವರ ಮನ ಗೆದ್ದಿದ್ದಾಳೆ. ಸರಕಾರಿ ಪ್ರಾಥಮಿಕ ಶಾಲೆ ಕರಂಬಾರ್ ಚಿತ್ರದಲ್ಲಿ ಕೂಡ ನಟಿಸುತ್ತಿದ್ದಾಳೆ. ಯಕ್ಷಗಾನ, ನಾಟಕ, ರೂಪಕ, ಗೀತಗಾಯನ ಎಲ್ಲದರಲ್ಲೂ ತೀರ್ಥ ತನ್ನ ಕೈಚಳಕ ಪ್ರದರ್ಶಿಸುತ್ತಾಳೆ. ಕಾರ್ಯಕ್ರಮಗಳಲ್ಲಿ ಒಳ್ಳೆಯ ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದಾಳೆ. ಹೆಸರಿನ ಮುಂದೆ ವಿಜೆ ಅಂತ ಹಾಕಿಸಿಕೊಳ್ಳಬೇಕೆಂಬ ಆಕೆಯ ಕನಸು ಕೂಡ ನನಸಾಗಿದೆ. ಖಾಸಗಿ ವಾಹಿನಿಯೊಂದರಲ್ಲಿ ‘ವೀಕೆಂಡ್ ವಿತ್ ಮಿ’ ಎಂಬ ಕಾರ್ಯಕ್ರಮವನ್ನು ಕೂಡ ನಡೆಸಿಕೊಡುತ್ತಿದ್ದಳು. ತುಳು ಸಭೆ – ಸಮಾರಂಭವನ್ನು ಚೆನ್ನಾಗಿ ನಿರೂಪಣೆ ಮಾಡುವ ಅದ್ಭುತ ಶಕ್ತಿ ಆಕೆಯಲ್ಲಿದೆ. ಮುಂಬೈಯಲ್ಲಿ ತೀರ್ಥಳ ಕಾರ್ಯಕ್ರಮಕ್ಕೆ ಅಪಾರ ಜನಮನ್ನಣೆ ದೊರೆತಿದೆ.

ಪ್ರತಿಭೆಗೆ ತಕ್ಕಂತೆ ನಾನಾ ಪ್ರಶಸ್ತಿಗಳು ತೀರ್ಥಳನ್ನು ಅರಸಿ ಬಂದಿವೆ.
ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ, ತುಳು ಕುವರಿ, ಸೌರಭ ರತ್ನ, ಕೊಂಡಾಟದ ಬಾಲೆ ಮುಂತಾದ ಪ್ರಶಸ್ತಿಗಳು ಬಂದಿವೆ. ಮಂಗಳೂರು ಆಕಾಶವಾಣಿ, ಉಡುಪಿಯ ಸ್ಪಂದನಾ ಟಿವಿ, ನಮ್ಮ ಕುಡ್ಲ ವಾಹಿನಿಯಲ್ಲಿ ಅತಿಥಿ ಕಲಾವಿದೆಯಾಗಿ ಭಾಗವಹಿಸಿದ್ದಾಳೆ. ಬಹುಮುಖ ಪ್ರತಿಭೆಯ ತೀರ್ಥಳಿಗೆ ಈ ಎಲ್ಲ ಸಾಂಸ್ಕೃತಿಕ ಚಟುವಟಿಕೆಗಳ ಜತೆಗೆ ಭವಿಷ್ಯದಲ್ಲಿ ಪೈಲಟ್ ಆಗುವ ಕನಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು