4:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ನಟನೆ, ಗಾಯನ, ನೃತ್ಯದಲ್ಲಿ ಎತ್ತಿದ ಕೈ: ತುಳು ಕುವರಿ 11ರ ಹರೆಯದ ತೀರ್ಥ ಪೊಳಲಿ ಹುಲಿ ಕುಣಿತಕ್ಕೂ ಸೈ!

24/06/2021, 07:24

ಲತಾ ಎ. ಕಲ್ಲಡ್ಕ ಮಂಗಳೂರು

info.reporterkarnataka@gmail.com

ಆಕೆಗಿನ್ನೂ ಬರೇ 11ರ ಹರೆಯ. ಅರಳು ಹುರಿದಂತೆ ಮಾತನಾಡುವ ವಾಕ್ಚತುರ್ಯ. ನಟನೆ, ನೃತ್ಯ, ಗಾಯನ, ಛದ್ಮವೇಷ, ಏಕಪಾತ್ರ ಅಭಿನಯ, ಇಷ್ಟೇ ಅಲ್ಲದೆ ತುಳುನಾಡಿನ ಹೆಮ್ಮೆಯ ಹುಲಿ ಕಣಿತ… ಹೀಗೆ ಎಲ್ಲದರಲ್ಲೂ ಆಕೆ ಸೈ.


ಇವಳು ಬೇರೆ ಯಾರೂ ಅಲ್ಲ, ಮಂಗಳೂರು ಮತ್ತು ಬಂಟ್ವಾಳ ತಾಲೂಕಿಗೆ ಹೊಂದಿಕೊಂಡಿರುವ ಪೊಳಲಿಯ ಅಡ್ಡೂರು ಗ್ರಾಮದ ಪೊನ್ನೆಲದ ಪುತ್ರಿ ತೀರ್ಥ ಪೊಳಲಿ. 

ಈಕೆ ಪೊನ್ನೆಲದ ಕೃಷ್ಣ ಅಮೀನ್ ಹಾಗೂ ಪ್ರೇಮಾ ದಂಪತಿಯ ಮುದ್ದಿನ ಮಗಳು. ಗಂಜಿಮಠದ ರಾಜ್ ಅಕಾಡೆಮಿ ಸ್ಕೂಲ್ ನ 6ನೇ ತರಗತಿ ವಿದ್ಯಾರ್ಥಿನಿ.

‘ಪನೋಡ ಬೊಡ್ಚ’ ತುಳು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಈ ಪುಟ್ಟ ತಾರೆ, ತನ್ನ ಅಭಿನಯದ ಮೂಲಕ ತುಳುವರ ಮನ ಗೆದ್ದಿದ್ದಾಳೆ. ಸರಕಾರಿ ಪ್ರಾಥಮಿಕ ಶಾಲೆ ಕರಂಬಾರ್ ಚಿತ್ರದಲ್ಲಿ ಕೂಡ ನಟಿಸುತ್ತಿದ್ದಾಳೆ. ಯಕ್ಷಗಾನ, ನಾಟಕ, ರೂಪಕ, ಗೀತಗಾಯನ ಎಲ್ಲದರಲ್ಲೂ ತೀರ್ಥ ತನ್ನ ಕೈಚಳಕ ಪ್ರದರ್ಶಿಸುತ್ತಾಳೆ. ಕಾರ್ಯಕ್ರಮಗಳಲ್ಲಿ ಒಳ್ಳೆಯ ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದಾಳೆ. ಹೆಸರಿನ ಮುಂದೆ ವಿಜೆ ಅಂತ ಹಾಕಿಸಿಕೊಳ್ಳಬೇಕೆಂಬ ಆಕೆಯ ಕನಸು ಕೂಡ ನನಸಾಗಿದೆ. ಖಾಸಗಿ ವಾಹಿನಿಯೊಂದರಲ್ಲಿ ‘ವೀಕೆಂಡ್ ವಿತ್ ಮಿ’ ಎಂಬ ಕಾರ್ಯಕ್ರಮವನ್ನು ಕೂಡ ನಡೆಸಿಕೊಡುತ್ತಿದ್ದಳು. ತುಳು ಸಭೆ – ಸಮಾರಂಭವನ್ನು ಚೆನ್ನಾಗಿ ನಿರೂಪಣೆ ಮಾಡುವ ಅದ್ಭುತ ಶಕ್ತಿ ಆಕೆಯಲ್ಲಿದೆ. ಮುಂಬೈಯಲ್ಲಿ ತೀರ್ಥಳ ಕಾರ್ಯಕ್ರಮಕ್ಕೆ ಅಪಾರ ಜನಮನ್ನಣೆ ದೊರೆತಿದೆ.

ಪ್ರತಿಭೆಗೆ ತಕ್ಕಂತೆ ನಾನಾ ಪ್ರಶಸ್ತಿಗಳು ತೀರ್ಥಳನ್ನು ಅರಸಿ ಬಂದಿವೆ.
ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ, ತುಳು ಕುವರಿ, ಸೌರಭ ರತ್ನ, ಕೊಂಡಾಟದ ಬಾಲೆ ಮುಂತಾದ ಪ್ರಶಸ್ತಿಗಳು ಬಂದಿವೆ. ಮಂಗಳೂರು ಆಕಾಶವಾಣಿ, ಉಡುಪಿಯ ಸ್ಪಂದನಾ ಟಿವಿ, ನಮ್ಮ ಕುಡ್ಲ ವಾಹಿನಿಯಲ್ಲಿ ಅತಿಥಿ ಕಲಾವಿದೆಯಾಗಿ ಭಾಗವಹಿಸಿದ್ದಾಳೆ. ಬಹುಮುಖ ಪ್ರತಿಭೆಯ ತೀರ್ಥಳಿಗೆ ಈ ಎಲ್ಲ ಸಾಂಸ್ಕೃತಿಕ ಚಟುವಟಿಕೆಗಳ ಜತೆಗೆ ಭವಿಷ್ಯದಲ್ಲಿ ಪೈಲಟ್ ಆಗುವ ಕನಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು