12:04 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ನಾಟೆಕಲ್‌ನಲ್ಲಿ ಶೀಘ್ರದಲ್ಲೇ ನೂತನ ಉಳ್ಳಾಲ ತಾಲೂಕು ಕಚೇರಿ ಕಾರ್ಯಾರಂಭ: ಶಾಸಕ ಯು.ಟಿ ಖಾದರ್ ಭರವಸೆ

29/01/2022, 22:58

ಮಂಗಳೂರು(reporterkarnataka.com): ನೂತನ ಉಳ್ಳಾಲ ತಾಲೂಕು ಕಚೇರಿಯನ್ನು ತಾತ್ಕಾಲಿಕವಾಗಿ ನಾಟೆಕಲ್‌ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಅತೀ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಉಳ್ಳಾಲ ಶಾಸಕ ಯು.ಟಿ. ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಟೆಕಲ್‌ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಸೋಮವಾರದಿಂದ ಕಚೇರಿ ಕಾರ್ಯದ ವಯರಿಂಗ್, ಸಾಫ್ಟ್‌ವೇರ್ ಅಳವಡಿಕೆ ಹೀಗೆ ತಾಂತ್ರಿಕ ಕೆಲಸ ಆರಂಭವಾಗುತ್ತದೆ. ಇದಾದ ಒಂದು ತಿಂಗಳೊಳಗೆ ಅಧಿಕೃತವಾಗಿ ಎಲ್ಲಾ ಸವಲತ್ತುಗಳೊಂದಿಗೆ ಉದ್ಘಾಟನೆ ನಡೆಸಲಿದ್ದೇವೆ.

ನೂತನ ಉಳ್ಳಾಲ ತಾಲೂಕು ಆಡಂ ಕುದ್ರುವಿನಿಂದ ಆರಂಭವಾಗಿ ತಲಪಾಡಿ ಗಡಿ ಹಾಗೂ ಸಜಿಪ ಪಡು ಸಾಲೆತ್ತೂರುವರೆಗೆ ಉಳ್ಳಾಲ ತಾಲೂಕು ಇರಲಿದೆ. ಇದರ ಜೊತೆಗೆ ಮಂಗಳೂರು ವಿಧಾನಸಭೆ ಕ್ಷೇತ್ರದ ಕೋಡ್ಮಣ್, ಮೇರಮಜಲ್, ಪುದು ಹಾಗೂ ತುಂಬೆ ಬಂಟ್ವಾಳ ತಾಲ್ಲೂಕಿನಲ್ಲೇ ಮುಂದುವರೆಯಲಿದೆ.

ಈಗಾಗಲೇ ಸಜಿಪದಿಂದ ತುಂಬೆಗೆ ಸಂಪರ್ಕಿಸುವ ಸೇತುವೆಯ ಕಾರ್ಯ ಕೊನೆಯ ಹಂತದಲ್ಲಿದೆ. ಅದರ ಕೆಲಸ ಮುಗಿದ ತಕ್ಷಣ ಉಳ್ಳಾಲ ಗ್ರಾಮಕ್ಕೆ ಈ ಗ್ರಾಮಗಳನ್ನು ಸೇರಿಸುವ ಬಗ್ಗೆ ಪರಿಶೀಲಿಸಲಾಗುವುದು.

ಕಳೆದ ಬಾರಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್‌ನಲ್ಲಿ ಉಳ್ಳಾಲ ನೂತನ ತಾಲೂಕು ಆಗಿ ಘೋಷಣೆಯಾಗಿತ್ತು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು