12:37 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ನಾಟೆಕಲ್‌ನಲ್ಲಿ ಶೀಘ್ರದಲ್ಲೇ ನೂತನ ಉಳ್ಳಾಲ ತಾಲೂಕು ಕಚೇರಿ ಕಾರ್ಯಾರಂಭ: ಶಾಸಕ ಯು.ಟಿ ಖಾದರ್ ಭರವಸೆ

29/01/2022, 22:58

ಮಂಗಳೂರು(reporterkarnataka.com): ನೂತನ ಉಳ್ಳಾಲ ತಾಲೂಕು ಕಚೇರಿಯನ್ನು ತಾತ್ಕಾಲಿಕವಾಗಿ ನಾಟೆಕಲ್‌ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಅತೀ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಉಳ್ಳಾಲ ಶಾಸಕ ಯು.ಟಿ. ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಟೆಕಲ್‌ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಸೋಮವಾರದಿಂದ ಕಚೇರಿ ಕಾರ್ಯದ ವಯರಿಂಗ್, ಸಾಫ್ಟ್‌ವೇರ್ ಅಳವಡಿಕೆ ಹೀಗೆ ತಾಂತ್ರಿಕ ಕೆಲಸ ಆರಂಭವಾಗುತ್ತದೆ. ಇದಾದ ಒಂದು ತಿಂಗಳೊಳಗೆ ಅಧಿಕೃತವಾಗಿ ಎಲ್ಲಾ ಸವಲತ್ತುಗಳೊಂದಿಗೆ ಉದ್ಘಾಟನೆ ನಡೆಸಲಿದ್ದೇವೆ.

ನೂತನ ಉಳ್ಳಾಲ ತಾಲೂಕು ಆಡಂ ಕುದ್ರುವಿನಿಂದ ಆರಂಭವಾಗಿ ತಲಪಾಡಿ ಗಡಿ ಹಾಗೂ ಸಜಿಪ ಪಡು ಸಾಲೆತ್ತೂರುವರೆಗೆ ಉಳ್ಳಾಲ ತಾಲೂಕು ಇರಲಿದೆ. ಇದರ ಜೊತೆಗೆ ಮಂಗಳೂರು ವಿಧಾನಸಭೆ ಕ್ಷೇತ್ರದ ಕೋಡ್ಮಣ್, ಮೇರಮಜಲ್, ಪುದು ಹಾಗೂ ತುಂಬೆ ಬಂಟ್ವಾಳ ತಾಲ್ಲೂಕಿನಲ್ಲೇ ಮುಂದುವರೆಯಲಿದೆ.

ಈಗಾಗಲೇ ಸಜಿಪದಿಂದ ತುಂಬೆಗೆ ಸಂಪರ್ಕಿಸುವ ಸೇತುವೆಯ ಕಾರ್ಯ ಕೊನೆಯ ಹಂತದಲ್ಲಿದೆ. ಅದರ ಕೆಲಸ ಮುಗಿದ ತಕ್ಷಣ ಉಳ್ಳಾಲ ಗ್ರಾಮಕ್ಕೆ ಈ ಗ್ರಾಮಗಳನ್ನು ಸೇರಿಸುವ ಬಗ್ಗೆ ಪರಿಶೀಲಿಸಲಾಗುವುದು.

ಕಳೆದ ಬಾರಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್‌ನಲ್ಲಿ ಉಳ್ಳಾಲ ನೂತನ ತಾಲೂಕು ಆಗಿ ಘೋಷಣೆಯಾಗಿತ್ತು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು