1:02 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಾಟೆಕಲ್‌ನಲ್ಲಿ ಶೀಘ್ರದಲ್ಲೇ ನೂತನ ಉಳ್ಳಾಲ ತಾಲೂಕು ಕಚೇರಿ ಕಾರ್ಯಾರಂಭ: ಶಾಸಕ ಯು.ಟಿ ಖಾದರ್ ಭರವಸೆ

29/01/2022, 22:58

ಮಂಗಳೂರು(reporterkarnataka.com): ನೂತನ ಉಳ್ಳಾಲ ತಾಲೂಕು ಕಚೇರಿಯನ್ನು ತಾತ್ಕಾಲಿಕವಾಗಿ ನಾಟೆಕಲ್‌ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಅತೀ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಉಳ್ಳಾಲ ಶಾಸಕ ಯು.ಟಿ. ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಟೆಕಲ್‌ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಸೋಮವಾರದಿಂದ ಕಚೇರಿ ಕಾರ್ಯದ ವಯರಿಂಗ್, ಸಾಫ್ಟ್‌ವೇರ್ ಅಳವಡಿಕೆ ಹೀಗೆ ತಾಂತ್ರಿಕ ಕೆಲಸ ಆರಂಭವಾಗುತ್ತದೆ. ಇದಾದ ಒಂದು ತಿಂಗಳೊಳಗೆ ಅಧಿಕೃತವಾಗಿ ಎಲ್ಲಾ ಸವಲತ್ತುಗಳೊಂದಿಗೆ ಉದ್ಘಾಟನೆ ನಡೆಸಲಿದ್ದೇವೆ.

ನೂತನ ಉಳ್ಳಾಲ ತಾಲೂಕು ಆಡಂ ಕುದ್ರುವಿನಿಂದ ಆರಂಭವಾಗಿ ತಲಪಾಡಿ ಗಡಿ ಹಾಗೂ ಸಜಿಪ ಪಡು ಸಾಲೆತ್ತೂರುವರೆಗೆ ಉಳ್ಳಾಲ ತಾಲೂಕು ಇರಲಿದೆ. ಇದರ ಜೊತೆಗೆ ಮಂಗಳೂರು ವಿಧಾನಸಭೆ ಕ್ಷೇತ್ರದ ಕೋಡ್ಮಣ್, ಮೇರಮಜಲ್, ಪುದು ಹಾಗೂ ತುಂಬೆ ಬಂಟ್ವಾಳ ತಾಲ್ಲೂಕಿನಲ್ಲೇ ಮುಂದುವರೆಯಲಿದೆ.

ಈಗಾಗಲೇ ಸಜಿಪದಿಂದ ತುಂಬೆಗೆ ಸಂಪರ್ಕಿಸುವ ಸೇತುವೆಯ ಕಾರ್ಯ ಕೊನೆಯ ಹಂತದಲ್ಲಿದೆ. ಅದರ ಕೆಲಸ ಮುಗಿದ ತಕ್ಷಣ ಉಳ್ಳಾಲ ಗ್ರಾಮಕ್ಕೆ ಈ ಗ್ರಾಮಗಳನ್ನು ಸೇರಿಸುವ ಬಗ್ಗೆ ಪರಿಶೀಲಿಸಲಾಗುವುದು.

ಕಳೆದ ಬಾರಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್‌ನಲ್ಲಿ ಉಳ್ಳಾಲ ನೂತನ ತಾಲೂಕು ಆಗಿ ಘೋಷಣೆಯಾಗಿತ್ತು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು