2:28 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ನಾಟೆಕಲ್‌ನಲ್ಲಿ ಶೀಘ್ರದಲ್ಲೇ ನೂತನ ಉಳ್ಳಾಲ ತಾಲೂಕು ಕಚೇರಿ ಕಾರ್ಯಾರಂಭ: ಶಾಸಕ ಯು.ಟಿ ಖಾದರ್ ಭರವಸೆ

29/01/2022, 22:58

ಮಂಗಳೂರು(reporterkarnataka.com): ನೂತನ ಉಳ್ಳಾಲ ತಾಲೂಕು ಕಚೇರಿಯನ್ನು ತಾತ್ಕಾಲಿಕವಾಗಿ ನಾಟೆಕಲ್‌ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಅತೀ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಉಳ್ಳಾಲ ಶಾಸಕ ಯು.ಟಿ. ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಟೆಕಲ್‌ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಸೋಮವಾರದಿಂದ ಕಚೇರಿ ಕಾರ್ಯದ ವಯರಿಂಗ್, ಸಾಫ್ಟ್‌ವೇರ್ ಅಳವಡಿಕೆ ಹೀಗೆ ತಾಂತ್ರಿಕ ಕೆಲಸ ಆರಂಭವಾಗುತ್ತದೆ. ಇದಾದ ಒಂದು ತಿಂಗಳೊಳಗೆ ಅಧಿಕೃತವಾಗಿ ಎಲ್ಲಾ ಸವಲತ್ತುಗಳೊಂದಿಗೆ ಉದ್ಘಾಟನೆ ನಡೆಸಲಿದ್ದೇವೆ.

ನೂತನ ಉಳ್ಳಾಲ ತಾಲೂಕು ಆಡಂ ಕುದ್ರುವಿನಿಂದ ಆರಂಭವಾಗಿ ತಲಪಾಡಿ ಗಡಿ ಹಾಗೂ ಸಜಿಪ ಪಡು ಸಾಲೆತ್ತೂರುವರೆಗೆ ಉಳ್ಳಾಲ ತಾಲೂಕು ಇರಲಿದೆ. ಇದರ ಜೊತೆಗೆ ಮಂಗಳೂರು ವಿಧಾನಸಭೆ ಕ್ಷೇತ್ರದ ಕೋಡ್ಮಣ್, ಮೇರಮಜಲ್, ಪುದು ಹಾಗೂ ತುಂಬೆ ಬಂಟ್ವಾಳ ತಾಲ್ಲೂಕಿನಲ್ಲೇ ಮುಂದುವರೆಯಲಿದೆ.

ಈಗಾಗಲೇ ಸಜಿಪದಿಂದ ತುಂಬೆಗೆ ಸಂಪರ್ಕಿಸುವ ಸೇತುವೆಯ ಕಾರ್ಯ ಕೊನೆಯ ಹಂತದಲ್ಲಿದೆ. ಅದರ ಕೆಲಸ ಮುಗಿದ ತಕ್ಷಣ ಉಳ್ಳಾಲ ಗ್ರಾಮಕ್ಕೆ ಈ ಗ್ರಾಮಗಳನ್ನು ಸೇರಿಸುವ ಬಗ್ಗೆ ಪರಿಶೀಲಿಸಲಾಗುವುದು.

ಕಳೆದ ಬಾರಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್‌ನಲ್ಲಿ ಉಳ್ಳಾಲ ನೂತನ ತಾಲೂಕು ಆಗಿ ಘೋಷಣೆಯಾಗಿತ್ತು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು