8:27 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು ಸಾವಿಗೆ ಶರಣು

18/05/2024, 18:44

ಹೈದರಾಬಾದ್(reporterkarnataka.com): ಕಿರುತೆರೆಯ ಪ್ರಸಿದ್ಧ ನಟಿ‌ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿ ಒಂದು ವಾರ ಕಳೆಯುವ ಮುನ್ನವೇ ಅವರ ಸ್ನೇಹಿತ ಕಿರು ತೆರೆಯ ನಟ ಚಂದ್ರಕಾಂತ್ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೈದರಾಬಾದ್‌ನ ಮಣಿಕೊಂಡದಲ್ಲಿರುವ ಸ್ವಗೃಹದಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಮಂಡ್ಯ‌ ಜಿಲ್ಲೆಯ ಹನಕೆರೆಯ ಪವಿತ್ರಾ ಜಯರಾಂ ಅವರ ಸಾವಿನ ಬೆನ್ನಲ್ಲೇ ಆಕೆಯ ಜತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು‌ ಶುಕ್ರವಾರ ಸಾವಿಗೆ ಶರಣಾಗಿದ್ದಾರೆ.
ಮೇ 12ರಂದು ಹೈದರಾಬಾದ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ನಟಿ ಪವಿತ್ರಾ ಜಯರಾಮ್ ಸಾವನ್ನಪ್ಪಿದ್ದರು. ಅಪಘಾತ ನಡೆದಾಗ ಅದೇ ಕಾರಿನಲ್ಲಿ ಚಂದ್ರಕಾಂತ್ ಕೂಡ ಪ್ರಯಾಣಿಸುತ್ತಿದ್ದರು. ಸಕಾಲದಲ್ಲಿ ಆ್ಯಂಬ್ಯುಲೆನ್ಸ್ ಸಿಗುತ್ತಿದ್ದರೆ ಪವಿತ್ರಾ ಅವರ ಪ್ರಾಣ ಉಳಿಸಬಹುದಿತ್ತು ಎಂದು ಚಂದ್ರಕಾಂತ್ ಆವತ್ತು ದುಃಖ ತೋಡಿಕೊಂಡಿದ್ದರು. ನಂತರ ಅವರು ಖಿನ್ನತೆಗೆ ಜಾರಿದ್ದರು. ಪವಿತ್ರಾ ಅವರ ಸಾವಿನಿಂದ ಮನನೊಂದು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ತ್ರಿನಯನಿ ತೆಲುಗು ಧಾರಾವಾಹಿಯಲ್ಲಿ ಚಂದು ಹಾಗೂ ಪವಿತ್ರಾ ಜಯರಾಮ್ ಅವರು ಒಟ್ಟಿಗೇ ನಟಿಸುತ್ತಿದ್ದರು.
ಚಂದ್ರು ಅವರು 2015ರಲ್ಲಿ ಶಿಲ್ಪಾಳನ್ನು ಪ್ರೀತಿಸಿ ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಪವಿತ್ರಾ ಅವರ ಪರಿಚಯವಾದ ಬಳಿಕ ಚಂದ್ರು ಅವರು ಪತ್ನಿಯಿಂದ ದೂರವಾಗಿದ್ದರು.ಹೈದರಾಬಾದ್‌ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು