10:47 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದ್ರೂ ರಸ್ತೆ ವ್ಯವಸ್ಥೆ ಇಲ್ಲ: ಕಾಲುಸಂಕದಲ್ಲೇ ಹೊಳೆ ದಾಟುತ್ತಿರುವ ಪರಿಶಿಷ್ಟ ಜನರ ಕುಟುಂಬ!

18/08/2024, 11:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ತರುವೆ ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ನೂರಾರು ಎಕರೆ ಕೃಷಿ ಭೂಮಿ ಸಂಪರ್ಕ ರಸ್ತೆ ಇಲ್ಲದೇ ಪಾಳು ಬಿದ್ದಿದೆ.ಇಲ್ಲಿನ ಪರಿಶಿಷ್ಟ ಪಂಗಡದ ಕುಟುಂಬವೊಂದು ಮಳೆಗಾಲ ಬಂತೆಂದರೆ ತಮ್ಮ ಮನೆ ತಲುಪಲು ಸಾಧ್ಯವಾಗದೇ ಕಂಗಾಲಾಗುತ್ತಿದೆ.ಕೊಟ್ಟಿಗೆಹಾರದ ತರುವೆ ಗ್ರಾಮದ ಸುರೇಶ್ ನಾಯ್ಕ್ ಅವರ ಕುಟುಂಬದ ಸತ್ಯ ಕಥೆಯಿದು. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಹೇಮಾವತಿಯ ಉಪ ನದಿಯಾದ ಸೋಮಾವತಿ ಮಳೆಗಾಲದಲ್ಲಿ ತುಂಬಿ ಹರಿದು ಹೇಮಾವತಿ ಸೇರುತ್ತದೆ. ಆ ನದಿಯ ಮತ್ತೊಂದು ಬದಿಯಲ್ಲಿ ಸುರೇಶ್ ನಾಯ್ಕ್ ಕುಟುಂಬ ಅನೇಕ ವರ್ಷದಿಂದ ಸೂರು ಕಟ್ಟಿಕೊಂಡು ಜೀವನ ನಡೆಸುತ್ತಿದ್ದು ಮಳೆಗಾಲ ಬಂತೆಂದರೆ ರಸ್ತೆ ಸಂಪರ್ಕವೂ ಇಲ್ಲದೇ ಜೀವ ಭಯದಲ್ಲೇ ಜೀವನ ನಡೆಸಿ ಸಂಪರ್ಕ ಕಸಿದು ಹೋಗುತ್ತಿದೆ. ಕುಟುಂಬ ಹಳ್ಳ ದಾಟಿ ಮನೆ ತಲುಪುವ ಸಾಹಸದ ಕೆಲಸಕ್ಕೆ ಇವರು ಅನಿವಾರ್ಯವಾಗಿ ಒಗ್ಗಿಕೊಂಡಿದ್ದಾರೆ.
ಅಪಾಯಕಾರಿ ಕಾಲುಸಂಕ(ಮರದದಿಮ್ಮಿಯ ಜೋಡಣೆ) ದಾಟಿ ಮನೆ ಸೇರುವುದು ಇವರಿಗೆ ಅನಿವಾರ್ಯತೆಯಾಗಿದೆ. ತುಂಬಿ ಹರಿಯುವ ಸೋಮಾವತಿ ಹಳ್ಳವನ್ನು ದಾಟಿ ಆಚೇಗಿನ ಕೃಷಿ ಭೂಮಿಯಲ್ಲಿ ಸಾಗುವಳಿ ಮಾಡಲು ಅನುಕೂಲ ಇಲ್ಲದ ಕಾರಣಕ್ಕೆ ನೂರಾರು ಎಕರೆ ಫಲವತ್ತಾದ ಗದ್ದೆಗಳು ಕೃಷಿ ಮಾಡದೇ ಪಾಳು ಬಿಟ್ಟು ಬರಡಾಗಿವೆ. ಈ ಪ್ರದೇಶಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಜನಪ್ರತಿನಿಧಿಗಳಿಗೆ, ಶಾಸಕರಿಗೆ ಮೂರು ವರ್ಷದಿಂದ ಸಂತ್ರಸ್ತ ಸುರೇಶ್ ಕುಟುಂಬ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೂ ಕಾಲು ಸಂಕ ಮಾತ್ರ ಬದಲಾಗಿಲ್ಲ. ಪರಿಶಿಷ್ಟ ಪಂಗಡದ ಕುಟುಂಬಕ್ಕೆ ಮೂಲಭೂತ ಸಂಪರ್ಕದ ಆಸರೆ ಸಿಗದೇ ಪರದಾಡುವಂತಾಗಿದೆ. ಮಲೆನಾಡಿನ ಈ ಗ್ರಾಮೀಣ ಪ್ರದೇಶದಲ್ಲಿ ಕಿರು ಸೇತುವೆ ನಿರ್ಮಾಣಕ್ಕೆ ಸರ್ಕಾರದಿಂದ ಇರುವ ಅವಕಾಶವನ್ನು ಬಳಸಿಕೊಂಡು ಈ ತರುವೆ ಗ್ರಾಮದ ಕುಟುಂಬಕ್ಕೂ ಕೂಡ ಸೇತುವೆ ನಿರ್ಮಾಣ ಮಾಡಲು ಸ್ಥಳೀಯರ ಒತ್ತಾಯವಿದೆ.

ಹಾಗಾದಲ್ಲಿ ಈ ಭಾಗದ ಕೃಷಿಕರಿಗೂ ಕೂಡ ಶಾಶ್ವತ ಪರಿಹಾರ ಸಿಕ್ಕಿದಂತಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ಈ ಕುಟುಂಬದ ಸಮಸ್ಯೆ ಬಗೆಹರಿಸಲು ಮುಂದೆ ಬರಬೇಕು.

*ಮೂರು ವರ್ಷದಿಂದ ನಮಗೆ ಕಿರು ಸೇತುವೆ ಮಾಡಿಕೊಡಿ ಎಂದು ಸರ್ಕಾರಿ ಅಧಿಕಾರಿಗಳಿಗೂ, ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ.ಆದರೂ ಯಾವುದೇ ಪ್ರಯೋಜನವಾಗಿಲ್ಲ'*
ಸುರೇಶ್ ನಾಯ್ಕ್, ಸಂತ್ರಸ್ತ,ಕೊಟ್ಟಿಗೆಹಾರ.

ಇತ್ತೀಚಿನ ಸುದ್ದಿ

ಜಾಹೀರಾತು