10:46 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ನವಭಾರತದ ಚಾಣಕ್ಯ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ: ಸ್ಪೀಕರ್ ಖಾದರ್

27/12/2024, 13:19

ಮಂಗಳೂರು(reporterkarnataka.com):ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕ ತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ. 1991ರ ಆರ್ಥಿಕ ಬಿಕ್ಕಟ್ಟಿನ ತೀವ್ರ ಸಂಕಷ್ಟದಲ್ಲಿ ಭಾರತವು ಸ್ಥಗಿತಗೊಂಡಿದ್ದ ಸಮಯದಲ್ಲಿ, ಅಧಿಕಾರ ಚುಕ್ಕಾಣಿ ಹಿಡಿದ ಡಾ. ಮನಮೋಹನ್ ಸಿಂಗ್ ಅವರ ದೂರದರ್ಶಿತ್ವವು ದೇಶವನ್ನು ಆರ್ಥಿಕ ಪುನಶ್ಚೇತನದ ಮಾರ್ಗದಲ್ಲಿ ನಡೆಸಿತು. ಅವರು ವಿದೇಶದಲ್ಲಿ ಅಡವಿಟ್ಟಿದ್ದ ಚಿನ್ನವನ್ನು ಬಿಡುಗಡೆ ಮಾಡಿದ್ದು ಮಾತ್ರವಲ್ಲದೆ, ಅವರ ನೇತೃತ್ವದಲ್ಲಿ ಆರಂಭವಾದ ಆರ್ಥಿಕ ಉದಾರೀಕರಣದ ನೀತಿಗಳು, ಭಾರತದ ಪಾಲಿಗೆ ಆರ್ಥಿಕ ಸ್ವಾವಲಂಬನೆ, ಸಮೃದ್ಧಿಯ ಹೊಸ ಅಧ್ಯಾಯವನ್ನೇ ತೆರೆಯಿತು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಇಡೀ ವಿಶ್ವ ಆರ್ಥಿಕತೆಯಿಂದ ಕಂಗಾಲಾದಾಗ ಭಾರತದ ಆರ್ಥಿಕತೆ ದೃಢವಾಗಿತ್ತು ಮತ್ತು ಭಾರತದ ಪ್ರತಿ ಮನೆ ಬಾಗಿಲಲ್ಲೂ ಇಂದು ಆರ್ಥಿಕ ಸ್ವಾತಂತ್ರ್ಯ ಹಾಗೂ ಸ್ವಾವಲಂಬನೆ ಕಂಡುಬಂದಿದ್ದರೆ ಅದು ಅವರ ಕೊಡುಗೆ ಎಂಬುವುದನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಅವರ ಪ್ರಗತಿಪರ ದೃಷ್ಠಿಕೋನ ಮತ್ತು ಅವಿಸ್ಮರಣೀಯ ಕೊಡುಗೆಗಳು ದೇಶದ ಮುಂದಿನ ತಲೆಮಾರಿಗೆ ಸ್ಫೂರ್ತಿಯಾಗಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು