6:53 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ನವ ಮಂಗಳೂರು ಬಂದರಿಗೆ ಸೆವೆನ್ ಸೀಸ್ ವಾಯೇಜರ್ ಕ್ರೂಸ್ ಹಡಗು ಆಗಮನ: ಸಾಂಪ್ರದಾಯಿಕ ಸ್ವಾಗತ

27/12/2024, 21:48

ಮಂಗಳೂರು(reporterkarnataka.com):ಸುಮಾರು 650 ಮಂದಿ ಪ್ರವಾಸಿಗರನ್ನು ಹೊತ್ತಸೆವೆನ್ ಸೀಸ್ ವಾಯೇಜರ್ ಕ್ರೂಸ್ ಹಡಗು ಶುಕ್ರವಾರ ನವ ಮಂಗಳೂರು ಬಂದರಿಗೆ ಆಗಮಿಸಿತು.
ಪ್ರಸಕ್ತ ಋತುವಿನ ಎರಡನೇ ಕ್ರೂಸ್ ಹಡಗು ಇದಾಗಿದೆ. ನವ ಮಂಗಳೂರು ಬಂದರು ಪ್ರಾಧಿಕಾರವು ಐಷಾರಾಮಿ ಬಹಮಿಯನ್ ಕ್ರೂಸ್ ಹಡಗು ಸೆವೆನ್ ಸೀಸ್ ವಾಯೇಜರ್ ಅನ್ನು ಹೆಮ್ಮೆಯಿಂದ ಸ್ವಾಗತಿಸಿತು.


ಕರಾವಳಿಯ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಸಾಂಪ್ರದಾಯಿಕ ಭಾರತೀಯ ಆತಿಥ್ಯದೊಂದಿಗೆ ಪ್ರಯಾಣಿಕರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ನಂತರ ಪ್ರವಾಸಿಗರಿಗೆ ಕಾರ್ಕಳ ಗೋಮಟೇಶ್ವರ ಬಸದಿ, ಸಾವಿರ ಕಂಬದ ಬಸದಿ,ಸೋನ್ಸ್ ಫಾರ್ಮ್, ಕಲಭಾವಿ ಗೋಡಂಬಿ ಕಾರ್ಖಾನೆ, ಗೋಕರ್ಣನಾಥ ದೇವಸ್ಥಾನ ಮತ್ತು ಸ್ಥಳೀಯ ಮಾರುಕಟ್ಟೆಗೆ
ಭೇಟಿ ನೀಡಲು ವ್ಯವಸ್ಥೆ ಮಾಡಲಾಯಿತು.
ಜಾಗತಿಕ ಕ್ರೂಸ್ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಉದ್ದೇಶದ ಹೆಸರಾಂತ ನಾರ್ವೇಜಿಯನ್ ಕ್ರೂಸ್ ಲೈನ್‌ನ ಭಾಗವಾಗಿರುವ ನೌಕೆಯು ನವ ಮಂಗಳೂರಿ ಬಂದರಿಗೆ ಬೆಳಗ್ಗೆ 6:30ಕ್ಕೆ ಆಗಮಿಸಿ ಸಂಜೆ 5:30 ಕ್ಕೆ ನಿರ್ಗಮಿಸಿತು. 650 ಪ್ರಯಾಣಿಕರು ಮತ್ತು 450 ಸಿಬ್ಬಂದಿ ಹಡಗಿನಲ್ಲಿದ್ದರು. ಸೆವೆನ್ ಸೀಸ್ ವಾಯೇಜರ್ ಐಶ್ವರ್ಯ ಮತ್ತು ವಿಶ್ವ ದರ್ಜೆಯ ಪ್ರಯಾಣವನ್ನು ಒಳಗೊಂಡಿದೆ.
206.5 ಮೀಟರ್ ಉದ್ದದ ಕ್ರೂಸ್ ಹಡಗು, ಫುಜೈರಾದಿಂದ ಕೊಲಂಬೊಗೆ ಮುಂಬೈ, ಗೋವಾ, ನವ ಮಂಗಳೂರು ಮತ್ತು ಕೊಚ್ಚಿನ್ ಮೂಲಕ ತನ್ನ ಪ್ರಯಾಣದ ಭಾಗವಾಗಿ ಅರಬ್ಬಿ ಸಮುದ್ರವನ್ನು ನ್ಯಾವಿಗೇಟ್ ಮಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು