3:38 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ನವ ಮಂಗಳೂರು ಬಂದರು: 270 ಪ್ರಯಾಣಿಕರ ಹೊತ್ತ 5ನೇ ಕ್ರೂಸ್ ಹಡಗು ಆಗಮನ

02/03/2024, 21:11

ಮಂಗಳೂರು(reporterkarnataka.com): ಪ್ರಸ್ತು ಋತುವಿನ 5ನೇ ವಿಹಾರ ನೌಕೆ ಎಂಎಸ್ ಹ್ಯಾಂಬರ್ಗ್ ಶನಿವಾರ ಬೆಳಗ್ಗೆ 8:00 ಗಂಟೆಗೆ ನವಮಂಗಳೂರು ಬಂದರಿಗೆ ಆಗಮಿಸಿತು.


ಹಡಗು 151 ಸಿಬ್ಬಂದಿಗಳೊಂದಿಗೆ 270 ಪ್ರಯಾಣಿಕರನ್ನು ಹೊತ್ತು ಬಂದರಿಗೆ ಆಗಮಿಸಿತು. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಪ್ರವಾಸಿಗರು ಕ್ರೂಸ್ ಲಾಂಜ್‌ನಲ್ಲಿ ವಿವಿಧ ಸಾಂಸ್ಕೃತಿಕ ಆಕರ್ಷಣೀಯ ಸ್ಥಳಗಳನ್ನು ನೋಡಿ ಆನಂದಿಸಿದರು.
ಪ್ರವಾಸಿಗರಿಗೆ ವೈದ್ಯಕೀಯ ತಪಾಸಣೆ, ಬಹು ವಲಸೆ ಮತ್ತು ಕಸ್ಟಮ್ಸ್ ಕೌಂಟರ್‌ಗಳು, ಮಂಗಳೂರು ನಗರದ ಸುತ್ತಮುತ್ತ ಸಾರಿಗೆ ಬಸ್‌ಗಳು ಮತ್ತು ವಿಶೇಷ ಟ್ಯಾಕ್ಸಿಗಳು, ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ವರ್ಚುವಲ್ ರಿಯಾಲಿಟಿ ಅನುಭವ ವಲಯ, ಉಚಿತ ವೈಫೈ ಸೇರಿದಂತೆ ಅನೇಕ ಸಿದ್ಧತೆಗಳನ್ನು ಮಾಡಲಾಗಿದೆ. ಎನ್ ಎಂಪಿಟಿ ಮತ್ತು ಪ್ರವಾಸೋದ್ಯಮ ಸಚಿವಾಲಯದಿಂದ ಮಂಗಳೂರಿನ ಯಕ್ಷಗಾನ ಕಲಾ ಪ್ರಕಾರವನ್ನು ಬಿಂಬಿಸುವ ಸೆಲ್ಫಿ ಸ್ಟ್ಯಾಂಡ್ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು