3:03 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ನಾವೆಲ್ಲರೂ ಯೋಗದ ಹಾದಿಯಲ್ಲಿ ಸಾಗೋಣ:  ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರಧಾನಿ ಮೋದಿ ಕರೆ

21/06/2022, 15:12

ಮೈಸೂರು(reporterkarnataka.com): ಯೋಗ ದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ನಾನು ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೈಸೂರು ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಯೋಗದ ಹಿನ್ನೆಲೆಯನ್ನು ನೆನೆದು ಹಾಡಿ ಹೊಗಳಿದರು.

ಯೋಗ ಈಗ ಇಡೀ ಜಗತ್ತಿನಲ್ಲಿ ಜನಪ್ರಿಯವಾಗಿದೆ. ಯೋಗ ಎನ್ನುವುದು ಆತ್ಮಪ್ರಕಾಶಕ್ಕೆ ನೆರವಾಗುವ ಪ್ರಕ್ರಿಯೆಯಾಗಿದೆ. ಭಾರತವು ಸದಾ ವಿಶ್ವದ ಒಳಿತು ಬಯಸಿದೆ. ಈ ಬಾರಿಯ ವಿಶ್ವ ಯೋಗದಿನದ ಆಶಯವೂ ಇದಕ್ಕೆ ಪೂರಕವಾಗಿದೆ. 

‘ಮಾನವತೆಗೆ ಯೋಗ ಎನ್ನುವುದು’ ಈ ವರ್ಷದ ಘೋಷವಾಕ್ಯ. ನಮ್ಮ ಋಷಿಮುನಿಗಳು ‘ಯೋಗದಿಂದ ವಿಶ್ವಕ್ಕೆ ಶಾಂತಿ’ ಎಂದು ಪ್ರತಿಪಾದಿಸಿದ್ದರು. ಯೋಗದಿಂದ ಸಮಾಜಕ್ಕೆ, ದೇಶಕ್ಕೆ, ವಿಶ್ವಕ್ಕೆ ಶಾಂತಿ ದೊರೆಯುತ್ತದೆ. ಇದನ್ನು ಕೆಲವರು ವಿಪರೀತದ ಚಿಂತನೆ ಎಂದುಕೊಳ್ಳಬಹುದು. ಆದರೆ ಭಾರತೀಯರಿಗೆ ಇದು ಹೊಸದಲ್ಲ. ಪಿಂಡದಲ್ಲಿರುವುದು ಬ್ರಹ್ಮಾಂಡದಲ್ಲಿದೆ ಎನ್ನುವುದು ಭಾರತೀಯರ ಚಿಂತನೆ. ನಾವು ಬದಲಾಗಲು ಆರಂಭಿಸಿದರೆ ಜಗತ್ತು ಬದಲಾಗುವುದು ಆರಂಭಿಸುತ್ತದೆ ಎಂದು ಹೇಳಿದರು.

ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಯೋಗದಿನ ನಡೆಯುತ್ತಿದೆ. ಇವು ಭಾರತದ ಇತಿಹಾಸಕ್ಕೆ ಸಾಕ್ಷಿ, ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ. ಯೋಗದಿನದ ಪ್ರಯುಕ್ತ ಎಲ್ಲರನ್ನೂ ಬೆಸೆಯುತ್ತಿದ್ದೇವೆ. ಯೋಗದ ಬಗ್ಗೆ ತಿಳಿಯೋಣ, ಯೋಗದ ರೀತಿಯಲ್ಲಿ ಬದುಕೋಣ, ಯೋಗವನ್ನು ನಮ್ಮದಾಗಿಸಿಕೊಳ್ಳೋಣ. ನಾವು ಯೋಗದ ರೀತಿಯಲ್ಲಿ ಜೀವನ ಮುಂದುವರಿಸೋಣ. ಯೋಗದಿಂದ ಸಿಗುವ ನೆಮ್ಮದಿಯನ್ನು ಎಲ್ಲರೂ ಸಂಭ್ರಮಿಸೋಣ. ಯೋಗದಿಂದ ನಾವು ಎಲ್ಲರೂ ಬೆಸೆದುಕೊಳ್ಳಲು ದೊಡ್ಡ ಅವಕಾಶ ಸಿಕ್ಕಿದೆ. ಈಗ ಯುವಕರು ಹೊಸಹೊಸ ಆಲೋಚನೆಗಳೊಂದಿಗೆ ಯೋಗದ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಸ್ಟಾರ್ಟ್ಅಪ್ ಅವಕಾಶಗಳೂ ಸಾಕಷ್ಟು ಇವೆ. ಮೈಸೂರಿನಲ್ಲಿ ಈಗ ಇನ್ನೊವೇಟಿವ್ ಡಿಜಿಟಲ್ ಎಕ್ಸಿಬಿಷನ್ ಆಯೋಜಿಸಿದ್ದೇವೆ ಎಂದು ಮೋದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು