11:36 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ನಾವೆಲ್ಲರೂ ಯೋಗದ ಹಾದಿಯಲ್ಲಿ ಸಾಗೋಣ:  ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರಧಾನಿ ಮೋದಿ ಕರೆ

21/06/2022, 15:12

ಮೈಸೂರು(reporterkarnataka.com): ಯೋಗ ದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ನಾನು ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೈಸೂರು ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಯೋಗದ ಹಿನ್ನೆಲೆಯನ್ನು ನೆನೆದು ಹಾಡಿ ಹೊಗಳಿದರು.

ಯೋಗ ಈಗ ಇಡೀ ಜಗತ್ತಿನಲ್ಲಿ ಜನಪ್ರಿಯವಾಗಿದೆ. ಯೋಗ ಎನ್ನುವುದು ಆತ್ಮಪ್ರಕಾಶಕ್ಕೆ ನೆರವಾಗುವ ಪ್ರಕ್ರಿಯೆಯಾಗಿದೆ. ಭಾರತವು ಸದಾ ವಿಶ್ವದ ಒಳಿತು ಬಯಸಿದೆ. ಈ ಬಾರಿಯ ವಿಶ್ವ ಯೋಗದಿನದ ಆಶಯವೂ ಇದಕ್ಕೆ ಪೂರಕವಾಗಿದೆ. 

‘ಮಾನವತೆಗೆ ಯೋಗ ಎನ್ನುವುದು’ ಈ ವರ್ಷದ ಘೋಷವಾಕ್ಯ. ನಮ್ಮ ಋಷಿಮುನಿಗಳು ‘ಯೋಗದಿಂದ ವಿಶ್ವಕ್ಕೆ ಶಾಂತಿ’ ಎಂದು ಪ್ರತಿಪಾದಿಸಿದ್ದರು. ಯೋಗದಿಂದ ಸಮಾಜಕ್ಕೆ, ದೇಶಕ್ಕೆ, ವಿಶ್ವಕ್ಕೆ ಶಾಂತಿ ದೊರೆಯುತ್ತದೆ. ಇದನ್ನು ಕೆಲವರು ವಿಪರೀತದ ಚಿಂತನೆ ಎಂದುಕೊಳ್ಳಬಹುದು. ಆದರೆ ಭಾರತೀಯರಿಗೆ ಇದು ಹೊಸದಲ್ಲ. ಪಿಂಡದಲ್ಲಿರುವುದು ಬ್ರಹ್ಮಾಂಡದಲ್ಲಿದೆ ಎನ್ನುವುದು ಭಾರತೀಯರ ಚಿಂತನೆ. ನಾವು ಬದಲಾಗಲು ಆರಂಭಿಸಿದರೆ ಜಗತ್ತು ಬದಲಾಗುವುದು ಆರಂಭಿಸುತ್ತದೆ ಎಂದು ಹೇಳಿದರು.

ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಯೋಗದಿನ ನಡೆಯುತ್ತಿದೆ. ಇವು ಭಾರತದ ಇತಿಹಾಸಕ್ಕೆ ಸಾಕ್ಷಿ, ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ. ಯೋಗದಿನದ ಪ್ರಯುಕ್ತ ಎಲ್ಲರನ್ನೂ ಬೆಸೆಯುತ್ತಿದ್ದೇವೆ. ಯೋಗದ ಬಗ್ಗೆ ತಿಳಿಯೋಣ, ಯೋಗದ ರೀತಿಯಲ್ಲಿ ಬದುಕೋಣ, ಯೋಗವನ್ನು ನಮ್ಮದಾಗಿಸಿಕೊಳ್ಳೋಣ. ನಾವು ಯೋಗದ ರೀತಿಯಲ್ಲಿ ಜೀವನ ಮುಂದುವರಿಸೋಣ. ಯೋಗದಿಂದ ಸಿಗುವ ನೆಮ್ಮದಿಯನ್ನು ಎಲ್ಲರೂ ಸಂಭ್ರಮಿಸೋಣ. ಯೋಗದಿಂದ ನಾವು ಎಲ್ಲರೂ ಬೆಸೆದುಕೊಳ್ಳಲು ದೊಡ್ಡ ಅವಕಾಶ ಸಿಕ್ಕಿದೆ. ಈಗ ಯುವಕರು ಹೊಸಹೊಸ ಆಲೋಚನೆಗಳೊಂದಿಗೆ ಯೋಗದ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಸ್ಟಾರ್ಟ್ಅಪ್ ಅವಕಾಶಗಳೂ ಸಾಕಷ್ಟು ಇವೆ. ಮೈಸೂರಿನಲ್ಲಿ ಈಗ ಇನ್ನೊವೇಟಿವ್ ಡಿಜಿಟಲ್ ಎಕ್ಸಿಬಿಷನ್ ಆಯೋಜಿಸಿದ್ದೇವೆ ಎಂದು ಮೋದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು